Menu

Home ನಲಿಕಲಿ About ☰ Menu


 

ಗಾದೆ ಮಾತುಗಳ ಸಂಗ್ರಹ..

ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ

➤ ಹಿತ್ತಲ ಗಿಡ ಮದ್ದಲ್ಲ.

➤ ಮಾಡಿದ್ದುಣ್ಣೋ ಮಹರಾಯ.

➤ ಕೈ ಕೆಸರಾದರೆ ಬಾಯಿ ಮೊಸರು.

➤ ಹಾಸಿಗೆ ಇದ್ದಷ್ತು ಕಾಲು ಚಾಚು.

➤ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ.

➤ ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರಂತೆ.

➤ ಎತ್ತೆಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದರಂತೆ .

➤ ಮನೇಲಿ ಇಲಿ, ಬೀದೀಲಿ ಹುಲಿ.

➤ ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋದಿಕೊಂಡನಂತೆ.

➤ ಕಾರ್ಯಾವಾಸಿ ಕತ್ತೆಕಾಲು ಹಿಡಿ.

➤ ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.

➤ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.

➤ ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.

➤ ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.

➤ ಅಕ್ಕಿ ಮೇಲೆ ಆಸೆ, ನೆಂಟರ ರ ಮೇಲೂ ಪ್ರೀತಿ.ಅಜ್ಜಿಗೆ ಅರಿವೆ ಚಿಂತೆ , ಮಗಳಿಗೆ ಗಂಡನ ಚಿಂತೆ.

➤ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರೀಲಿ ಕೊಡೆ ಹಿಡಿದನಂತೆ.

➤ ಅತ್ತೆಗೊಂದು ಕಾಲ ಸೊಸೆಗೊಂದು ಕಾಲ.

➤ ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.

➤ ಬೇಲೀನೆ ಎದ್ದು ಹೊಲ ಮೆಯ್ದಂತೆ .

➤ ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.

➤ ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ.

➤ ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.

➤ ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ.

➤ ದೇವರು ವರ ಕೊಟ್ರು ಪೂಜಾರಿ ಕೊಡ.

➤ ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.

➤ ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.

➤ ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಎಂದರಂತೆ .

➤ ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.

➤ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.

➤ ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?

➤ ಗೆದ್ದೆತ್ತಿನ ಬಾಲ ಹಿಡಿದ ಹಾಗೆ.

➤ ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ0ತೆ.

➤ ಭಂಗಿ ದೇವರಿಗೆ ಹೆಂಡುಗುಡುಕ ಪೂಜಾರಿ.

➤ ಕಾಸಿಗೆ ತಕ್ಕ ಕಜ್ಜಾಯ.

➤ ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.

➤ ಕೂಸು ಹುಟ್ಟುವ ಮುಂಚೆ ಕುಲಾವಿ.

➤ ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಳಗೆ ತೂರು.

➤ ಇಬ್ಬರ ಜಗಳ ಮೂರನೆಯವನಿಗೆ ಲಾಭ.

➤ ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.

➤ ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.

➤ ಉಚ್ಚೇಲಿ ಮೀನು ಹಿಡಿಯೋ ಜಾತಿ.

➤ ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳಿತಾ ಬೆಳಿತಾ ದಾಯಾದಿಗಳು.

➤ ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.

➤ ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.

➤ ಅಂಗೈಯಲ್ಲಿ ಬೆಣ್ಣೆ ಇಟ್ಕೊಂಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರಂತೆ

➤ ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅಂದ ಹಾಗೆ.

➤ ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?

➤ ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.

➤ ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.

➤ ಮಾತು ಬೆಳ್ಳಿ, ಮೌನ ಬಂಗಾರ

➤ ಎಲ್ಲಾರ ಮನೆ ದೋಸೆನೂ ತೂತೆ.

➤ ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು.

➤ ಅಡುಗೆ ಮಾಡಿದವಳಿಗಿಂತ ಬಡಿಸಿದವಲೇ ಮೇಲು.

➤ ತಾಯಿಯಂತೆ ಮಗಳು ನೂಲಿನಂತೆ ಸೀರೆ.

➤ ಅನುಕೂಲ ಸಿಂಧು , ಅಭಾವ ವೈರಾಗ್ಯ.

➤ ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.

➤ ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.

➤ ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?

➤ ಮನೆಗೆ ಮಾರಿ, ಊರಿಗೆ ಉಪಕಾರಿ.

➤ ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?

➤ ಅಲ್ಪರ ಸಂಗ ಅಭಿಮಾನ ಭಂಗ .

➤ ಸಗಣಿಯವನ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು.

➤ ಮಾಡಿದವರ ಪಾಪ ಆಡಿದವರ ಬಾಯಲ್ಲಿ.

➤ ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?

➤ ಗೋರ್ಕಲ್ಲ ಮೇಲೆ ನೀರು ಸುರಿದಂತೆ

➤ ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?

➤ ಗಾಳಿ ಬಂದಾಗ ತೂರಿಕೋ.

➤ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.

➤ ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.

➤ ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ.

➤ ದುಡ್ಡೇ ದೊಡ್ಡಪ್ಪ.

➤ ಬರಗಾಲದಲ್ಲಿ ಅಧಿಕ ಮಾಸ.

➤ ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?

➤ ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡ ಹಾಗೆ

➤ ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.

➤ ಮಂತ್ರಕ್ಕಿಂತ ಉಗುಳೇ ಜಾಸ್ತಿ.

➤ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.

➤ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.

➤ ಕಂತೆಗೆ ತಕ್ಕ ಬೊಂತೆ .

➤ ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.

➤ ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು.

➤ ಓದಿ ಓದಿ ಮರುಳಾದ ಕೋಚಂಭಟ್ಟ .

➤ ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.

➤ ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು.

➤ ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.

➤ ಓದುವಾಗ ಓದು, ಆಡುವಾಗ ಆಡು.

➤ ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.

➤ ಸಂಸಾರ ಗುಟ್ಟು, ವ್ಯಾಧಿ ರಟ್ಟು.

➤ ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರಂತೆ .

➤ ಕೊಟ್ಟವನು ಕೋಡಂಗಿ , ಇಸ್ಕೊಂಡೋನು ಈರಭದ್ರ.

➤ ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.

➤ ಮುಖ ನೋಡಿ ಮಣೆ ಹಾಕು.

➤ ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ.

➤ ಮಂತ್ರಕ್ಕೆ ಮಾವಿನಕಾಯಿ ಉದುರತ್ಯೇ ?

➤ ತುಂಬಿದ ಕೊಡ ತುಳುಕುವುದಿಲ್ಲ.

➤ ಉಪಿಗಿಂತ ರುಚಿಯಿಲ್ಲ ತಾಯಿಗಿಂತ ದೇವರಿಲ್ಲ.

➤ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?

➤ ಇರಲಾರದೆ ಇರುವೆ ಬಿಟ್ಟುಕೊಂಡ ಹಾಗೆ.

➤ ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.

➤ ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರು.

➤ ದುಡಿಮೆಯೇ ದುಡ್ಡನ ತಾಯಿ.

➤ ಇಲಿ ಬಂತು ಅಂದರೆ ಹುಲಿ ಬಂತು ಎಂದರು .

➤ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸಂಕಟ

➤ ಊರಿಗೆ ಬಂದವಳು ನೀರಿಗೆ ಬರದೇ ಇರುತ್ತಾಳೆಯೇ ?

➤ ಇರುಳು ಕಂಡ ಭಾವೀಲಿ ಹಗಲು ಬಿದ್ದರಂತೆ

➤ ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.

➤ ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.

➤ ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.

➤ ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.

➤ ಹೊರಗೆ ಥಳಕು ಒಳಗೆ ಹುಳಕು.

➤ ಸಂಕಟ ಬಂದಾಗ ವೆಂಕಟರಮಣ

➤ ಯಥಾ ರಾಜ ತಥಾ ಪ್ರಜಾ.

➤ ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.

➤ ಬೆರಳು ತೋರಿಸಿದರೆ ಹಸ್ತ ನುಂಗಿದಂತೆ .

➤ ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ .

➤ ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.

➤ ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ.

➤ ಬಡವನ ಕೋಪ ದವಡೆಗೆ ಮೂಲ.

➤ ಒಪ್ಪೋತ್ತುಂಡವ ಯೋಗಿ, ಎರಡೊತ್ತುತಂದವ ಭೋಗಿ, ಮೂರೊತ್ತುಂಡವ ರೋಗಿ, ನಾಲ್ಕೊತ್ತುಂಡವನ ಹೊತ್ಕೊಂಡ್ಹೋಗಿ.

➤ ಬಲ್ಲವನೇ ಬಲ್ಲ ಬೆಲ್ಲದ ರುಚಿಯ.

➤ ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.

➤ ಶರಣರ ಬದುಕು ಅವರ ಮರಣದಲ್ಲಿ ನೋಡು.

➤ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗೆ.

➤ ಕಳ್ಳನ ಮನಸ್ಸು ಹುಳಿ-ಹುಳಿಗೆ.

➤ ಕೋತಿಗೆ ಹೆಂಡ ಕುಡಿಸಿದ ಹಾಗೆ.

➤ ಹಾವೂ ಸಾಯಬೇಕು, ಕೋಲೂ ಮುರಿಯಬಾರದು.

➤ ಹಾಲಿನಲ್ಲಿ ಹುಳಿ ಹಿಂಡಿದಂತೆ .

➤ ಮಳ್ಳಿ ಮಳ್ಳಿ ಮಂಚಕ್ಕೆ ಎಷ್ತು ಕಾಲು ಎಂದರೆ , ಮೂರು ಮತ್ತೊಂದು ಅಂದಳಂತೆ .

➤ ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.

➤ ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು ಸಂಬಂಧ ಅಂದ ಹಾಗೆ.

➤ ನಾರಿ ಮುನಿದರೆ ಮಾರಿ.

➤ ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು.

➤ ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ.

➤ ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.

➤ ಹರೆಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.

➤ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು.

➤ ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.

➤ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು.

➤ ಬೆಳ್ಳಗಿರುವುದೆಲ್ಲಾ ಹಾಲಲ್ಲ.

➤ ಹೊಸ ವೈದ್ಯನಿಗಿಂತ ಹಳೇ ರೋಗೀನೇ ಮೇಲು.

➤ ಬಡವರ ಮನೆ ಊಟ ಚೆನ್ನ, ಶ್ರೀಮಂತರ ಮನೆ ನೋಟ ಚೆನ್ನ.

➤ ತೋಟ ಶೃಂಗಾರ , ಒಳಗೆ ಗೋಣಿ ಸೊಪ್ಪು.

➤ ಬಾಯಿ ಬಿಟ್ಟರೆ ಬಣ್ಣಗೇಡು.

➤ ಸಂಕಟ ಬಂದಾಗ ವೆಂಕಟರಮಣ .

➤ ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದನಂತೆ

➤ ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ.

➤ ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು.

➤ ಮನೆ ತುಂಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊಂಡರಂತೆ .

➤ ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.

➤ ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದಂತೆ

➤ ಮೀಸೆ ಬಂದವನಿಗೆ ದೇಶ ಕಾಣಲ್ಲ

➤ ಊರು ಸುಟ್ಟರೂ ಹನುಮಂತರಾಯ ಹೊರಗೆ.

➤ ಆಕಳು ಕಪ್ಪಾದರೆ ಹಾಲು ಕಪ್ಪೆ.

➤ ಕಬ್ಬು ಡೊಂಕಾದರೆ ಸಿಹಿ ಡೊಂಕೇ .

➤ ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.

➤ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ

➤ ಕೋಣನ ಮುಂದೆ ಕಿನ್ನರಿ ಬಾರಿಸಿದ ಹಾಗೆ.

➤ ನರಿ ಕೂಗು ಗಿರಿ ಮುಟ್ಟುತ್ಯೇ ?

➤ ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.

➤ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ.

➤ ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.

➤ ತಂಗನ ಮುಂದೆ ಸಿಂಗವೇ? ಸಿಂಗನ ಮುಂದೆ ಮಂಗನೇ ?

➤ ಕಾಸಿದ್ದರೆ ಕೈಲಾಸ.

➤ ಕಂಕುಳದಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.

➤ ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.

➤ ಕೆಲಸವಿಲ್ಲದ ಕುಂಬಾರ ಮಗನ ಮುಕಳಿ ಕೆತ್ತಿದನಂತ .

➤ ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.

➤ ಕಳ್ಳನ ಹೆಂಡತಿ ಎಂದಿದ್ದರೂ ಮುಂಡೆ .

➤ ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ.

➤ ಹೂವಿನ ಜೊತೆ ದಾರ ಮುಡಿಯೇರಿತು.

➤ ಮಳೆ ಹುಯ್ದರೆ ಕೇಡಲ್ಲ, ಮಗ ಉಂಡರೆ ಕೇಡಲ್ಲ.

➤ ಐದು ಬೆರಳು ಒಂದೇ ಸಮ ಇದುವುದಿಲ್ಲ.

➤ ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುವುದಿಲ್ಲ.

➤ ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.

➤ ದೀಪದ ಕೆಳಗೆ ಯಾವತ್ತೂ ಕತ್ತಲೆ.

➤ ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯ್ತು ಎಂದುಕೊಂಡರು

➤ ಅತ್ತ ದರಿ, ಇತ್ತ ಪುಲಿ.

➤ ಬಿಸಿ ತುಪ್ಪ, ನುಂಗೋಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.

➤ ಆಪತ್ತಿಗಾದವನೇ ನೆಂಟ .

➤ ಶಂಖದಿಂದ ಬಂದರೇನೇ ತೀರ್ಥ.

➤ ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.

➤ ಎಲ್ಲಾ ಜಾಣ, ತುಸು ಕೋಣ.

➤ ಇಟ್ಟುಕೊಂಡವಳು ಇರೋ ತನಕ, ಕಟ್ಟಿಕೊಂಡವಳು ಕೊನೇ ತನಕ.

➤ ಮೂಗಿಗಿಂತ ಮೂಗುತ್ತಿ ಭಾರ.

➤ ನವಿಲನ್ನು ನೋಡಿ ಕೆಂಭೂತ ಪುಕ್ಕ ಕೆದರಿದಂತೆ .

➤ ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ .

➤ ಕಣ್ಣರಿಯದಿದ್ದರೂ ಕರುಳರಿಯುತ್ತದೆ.

➤ ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.

➤ ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.

➤ ಇರೋ ಮೂವರಲ್ಲಿ ಕದ್ದೋರು ಯಾರು ?

➤ ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.

➤ ತೋಳ ಬಿದ್ದರೆ ಆಳಿಗೊಂದು ಕಲ್ಲು.

➤ ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು.

➤ ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.

➤ ಮುಸುಕಿನೊಳಗೆ ಗುದ್ದಿಸಿಕೊಂಡಂತೆ .

➤ ತನ್ನ ಓಣಿಯಲ್ಲಿ ನಾಯಿಯೂ ಸಿಂಹ .

➤ ಹೆದರುವವರ ಮೇಲೆ ಕಪ್ಪೆ ಎಸೆದಂತೆ .

➤ ಹೊಳೆ ದಾಟಿದ ಮೇಲೆ ಅಂಬಿಗ ಮಿಂಡ

➤ ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?

➤ ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.

➤ ಯುದ್ಧ ಕಾಲೇ ಶಸ್ತ್ರಾಭ್ಯಾಸ.

➤ ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.

➤ ನಾಯಿ ಬಾಲ ಇಂದಿಗೂ ಡೊಂಕು .

➤ ಮಹಾಜನಗಳು ಹೋದದ್ದೇ ದಾರಿ.

➤ ಅರವತ್ತಕ್ಕೆ ಅರಳು ಮರಳು.

➤ ಜನ ಮರುಳೋ ಜಾತ್ರೆ ಮರುಳೋ.

➤ ಕುಂಟನಿಗೆ ಎಂಟು ಚೇಶ್ಟೆ.

➤ ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.

➤ ಬೊಗಳುವ ನಾಯಿ ಕಚ್ಚುವುದಿಲ್ಲ.

➤ ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.

➤ ಕೈಗೆಟುಕದ ದ್ರಾಕ್ಷಿ ಹುಳಿ.

➤ ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು .

➤ ದುಷ್ಟರ ಕಂಡರೆ ದೂರ ಇರು.

➤ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ.

➤ ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.

➤ ಕಂಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.

➤ ಹಂಗಿನ ನೆರೆಮನೆಗಿಂತ ಗುಡಿಸಲೇ ಮೇಲು.

➤ ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎಂದೂ ಅಳಬೇಡ.

➤ ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ, ಎಂದೂ ಹೆಚ್ಚು ರುಚಿ.

➤ ಕುದಿಯುವ ಎಣ್ಣೆಯಿಂದ ಕಾದ ತವಾದ ಮೇಲೆ ಬಿದ್ದ ಹಾಗೆ.

➤ ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.

➤ ಹಳೆ ಚಪ್ಪಲಿ, ಹೊಸ ಹೆಂಡತಿ ಕಚ್ಚೂಲ್ಲ.

➤ ರವಿ ಕಾಣದ್ದನ್ನು ಕವಿ ಕಂಡ .

➤ ಕೆಟ್ಟು ಪಟ್ಟಣ ಸೇರು.

➤ ಕಾಲಿನದು ಕಾಲಿಗೆ, ತಲೆಯದು ತಲೆಗೆ.

➤ ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.

➤ ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?

➤ ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.

➤ ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.

➤ ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.

➤ ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿದಂತೆ .

➤ ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.

➤ ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?

➤ ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.

➤ ಮದುವೆಯಾಗೋ ಗಂಡ ಅಂದರೆ ನೀನೆ ನನ್ನ ಹೆಂಡತಿಯಾಗು ಅಂದ ಹಾಗೆ.

➤ ಕೈಗೆ ಬಂಡ ತುತ್ತು ಬಾಯಿಗೆ ಬರಲಿಲ್ಲ.

➤ ತಾನೂ ತಿನ್ನ, ಪರರಿಗೂ ಕೊಡ.

➤ ಗಂಡಸಿಗೇಕೆ ಗೌರಿ ದುಃಖ ?

➤ ನಗುವ ಹೆಂಗಸು , ಅಳುವ ಗಂಡಸು ಇಬ್ಬರನ್ನೂ ಸಂಬಾಬಾರದು .

➤ ನೂರು ಜನಿವಾರ ಒಟ್ಟಿಗಿರಬಹುದು, ಮೂರು ಜಡೆ ಒಟ್ಟಿಗಿರುವುದಿಲ್ಲ.

➤ ಗಾಯದ ಮೇಲೆ ಬರೆ ಎಳೆದ ಹಾಗೆ.

➤ ಗುಡ್ಡ ಕಡಿದು, ಹಳ್ಳ ತುಂಬಿಸಿ , ನೆಲ ಸಮ ಮಾಡಿದ ಹಾಗೆ.

➤ ಅತಿ ಆಸೆ ಗತಿ ಕೇಡು.

➤ ವಿನಾಶ ಕಾಲೇ ವಿಪರೀತ ಬುದ್ಧಿ.

➤ ಅತಿಯಾದರೆ ಆಮೃತವೂ ವಿಷವೇ.

➤ ಬಡವ, ನೀ ಮಡಿಗಿದಾಂಗ ಇರು.

➤ ಆತುರಗಾರನಿಗೆ ಬುದ್ಧಿ ಮಟ್ಟ.

➤ ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದ ಹಾಗೆ.

➤ ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.

➤ ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ.

➤ ಉಂಡೂ ಹೋದ, ಕೊಂಡೂ ಹೋದ.

➤ ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಅಂದರಂತೆ

➤ ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರಸಿದ ಹಾಗೆ.

➤ ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.

➤ ಹಸಿ ಗೋಡೆ ಮೇಲೆ ಹರಳು ಎಸೆದಂತೆ .

➤ ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.

➤ ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.

➤ ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ.


No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post