✯"ವ್ಯಕ್ತಿಯು ಹುಟ್ಟಿನಿಂದ ಸಾವಿನವರೆಗೆ ಪಡೆದ ಒಟ್ಟು ಅನುಭವವೇ ಶಿಕ್ಷಣ"
✯"ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ."
- ಸ್ವಾಮಿ ವಿವೇಕಾನಂದರು.
✯"ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ."
- ಮಾಹಾತ್ಮ ಗಾಂಧೀಜಿ.
✯"ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು. ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು.
- ಜಿಡ್ಡು ಕೃಷ್ಣಮೂರ್ತಿ.
✯"ಮಗುವಿನಲ್ಲಿರುವ ಅಂತಃಶಕ್ತಿಯನ್ನು ಹೊರಗೆಳೆಯುವುದೇ ಶಿಕ್ಷಣ"
- ಸ್ವಾಮಿ ವಿವೇಕಾನಂದರು.
✯"ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ."
- ಡಾ. ಎಸ್. ರಾಧಾಕೃಷ್ಣನ್.
✯"ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ. ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ."
- ಬರ್ಕ.
✯"ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ.
- ಜಾನ್ ಟ್ಯೂಯ್ಲಿ.
✯"ಸಮನ್ವಯತೆ, ಸಮತೋಲನ, ಉಪಯುಕ್ತತೆ, ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು."
- ರೂಸೋ.
✯"ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು."
- ಅಜ್ಞಾತ.
✯"ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು."
- ನೀತಿವಚನ.
✯"ಶಿಕ್ಷಣವೇ ಜೀವನದ ಬೆಳಕು"
- ಗೊರೂರು.
✯"ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ."
- ಡಾ: ಎಸ್. ರಾಧಾಕೃಷ್ಣನ್.
✯"ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ"
- ಸ್ವಾಮಿ ವಿವೇಕಾನಂದರು.
✯"ವಿದ್ಯೆ ಗುರುಗಳ ಗುರು."
- ಭ್ರತೃ ಹರಿ.
✯"ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ."
✯"ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ."
- ಹರ್ಡೇಕರ್ ಮಂಜಪ್ಪ.
✯"ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ."
- ಸ್ವಾಮಿ ವಿವೇಕಾನಂದರು.
✯"ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು."
- ಜಾನ್ ಡ್ಯೂಯಿ.
✯"ಶಿಕ್ಷಣಕ್ಕಿಂತಲೂ ಮನುಷ್ಯರಿಗೆ ಶೀಲ ಚರಿತ್ರೆಗಳು ಹೆಚ್ಚು ಅವಶ್ಯಕ."
- ಸ್ಪೆನ್ಸರ್.
✯"ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ."
- ಚಾರ್ಲ್ಸ್ ಡೆಕ್ಕನ್.
✯"ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ."
- ಗಯಟೆ.
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.