ವಿಶ್ವ ವಿನೂತನ ವಿದ್ಯಾ ಚೇತನ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ ಜಯ ಭಾರತಿ ।। ಪ ।।
ಕರುನಾಡ ಸರಸ್ವತಿ
ಗುಡಿ ಗೋಪುರ ಸುರ ಶಿಲ್ಪ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ
ಪವಿತ್ರಿತ ಕ್ಷೇತ್ರ ಮನೋಹಾರಿ ।। ೧ ।।
ಗಂಗ ಕದಂಬ ರಾಷ್ಟ್ರಕೂಟ ಬಲ
ಚಾಲುಕ್ಯ ಹೊಯ್ಸಳ ಬಲ್ಲಾಳ
ಹಕ್ಕ ಬುಕ್ಕ ಪುಲಿಕೇಶಿ ವಿಕ್ರಮರ
ಚೆನ್ನಮ್ಮಾಜಿಯ ವೀರಶ್ರೀ ।। ೨ ।।
ತ್ಯಾಗ ಭೋಗ ಸಮಯೋಗದ ದೃಷ್ಟಿ
ಬೆಳುವೊಲ ಮಲೆ ಕರೆ ಸುಂದರ ಸೃಷ್ಟಿ
ಜ್ಞಾನದ ವಿಜ್ಞಾನದ ಕಲೆಯೈಸಿರಿ
ಸಾರೋದಯ ಧಾರಾ ನಗರಿ ।। ೩ ।।
ಅರಿವೆ ಗುರುನುಡಿ ಜ್ಯೋತಿರ್ಲಿಂಗ
ದಯವೇ ಧರ್ಮದ ಮೂಲ ತರಂಗ
ವಿಶ್ವ ಭಾರತಿಗೆ ಕನ್ನಡದಾರತಿ
ಮೊಳಗಲಿ ಮಂಗಲ ಜಯಭೇರಿ ।। ೪ ।।
----------೦----------
ಸಾಹಿತ್ಯ : ಚನ್ನವೀರ ಕಣವಿ
ಸಂಗೀತ : ಎಚ್. ಕೆ. ನಾರಾಯಣ್
ಗಾಯನ : ಸಮೂಹ
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.