Menu

Home ನಲಿಕಲಿ About ☰ Menu


 

ರಾಷ್ಟ್ರೀಯ ಕ್ರೀಡಾ ದಿನ - 'ಮೇಜರ್ ಧ್ಯಾನ್‌ ಚಂದ್‌'

Indian National Sports Day
   “ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ” ಎಂಬ ವಿವೇಕಾನಂದರ ವಾಣಿಯಂತೆ  ದೈಹಿಕವಾಗಿ ಸದೃಢವಾಗಿರುವುದು  ಅತ್ಯಂತ ಮಹತ್ವದ್ದಾಗಿದೆ. ಹಾಗಾಗಿಯೇ ಪ್ರತಿವರ್ಷ ಆಗಸ್ಟ್ 29 ರಂದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ ಚಂದ್‌ ಅವರು ಜನುಮದಿನವನ್ನು ಭಾರತದಲ್ಲಿ 'ರಾಷ್ಷ್ರೀಯ ಕ್ರೀಡಾ ದಿನ' ಎಂದು ಆಚರಿಸಲಾಗುತ್ತದೆ 

​ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ :
        ಭಾರತದ ಹಾಕಿ ದಂತಕತೆ, ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಆಗಸ್ಟ್‌ 29 ರಂದು 'ರಾಷ್ಟ್ರೀಯ ಕ್ರೀಡಾ ದಿನ' ಎಂದು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ಆಚರಿಸಲಾಯಿತು. ಅದೇ ವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನು, ರಾಷ್ಟ್ರೀಯ ದಿನಗಳ ಪಟ್ಟಿಗೆ ಸೇರಿಸಲಾಯಿತು. ಮೇಜರ್ ಧ್ಯಾನದ ಚಂದ್ ಆಗಸ್ಟ್ 29, 1905 ರಲ್ಲಿ ಅಹಮದಾಬಾದ್‌ನಲ್ಲಿ ಜನಿಸಿದರು. ವಿಶ್ವಕಂಡ ಅಪರೂಪದ, ಅತ್ಯತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಧ್ಯಾನ್‌ ಚಂದ್ ಪಾತ್ರರಾಗಿದ್ದರು.

ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಮಹತ್ವ :
       ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯ ಮುಖ್ಯ ಉದ್ದೇಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು. ಮತ್ತು ದೈನಂದಿನ ಜೀವನದಲ್ಲಿ ದೈಹಿಕವಾಗಿ ಸಕ್ರಿಯವಾಗಿರುವಂತೆ ಪ್ರೇರೆಪಿಸುವುದು & ಕ್ರೀಡೆಯಿಂದಾಗುವ ಅನುಕೂಲಗಳನ್ನು ತಿಳಿಸಿ ಯುವಜನತೆಯಲ್ಲಿ ಕ್ರೀಡಾಪ್ರೇಮ ಹೆಚ್ಚಿಸುವುದು. ಇದು ದೇಶದಲ್ಲಿ ಕ್ರೀಡಾಭಿಮಾನಿಗಳನ್ನು ಆಕರ್ಷಿಸುವಲ್ಲಿ ಯಶಸ್ಸು ಕಾಣುತ್ತಿದೆ.  2012 ರಲ್ಲಿ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಉದ್ಘಾಟನಾ ಆಚರಣೆಯ ನಂತರ, ವಿವಿಧ ಕ್ರೀಡೆ-ಸಂಬಂಧಿತ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿತು. ಇದರ ಭಾಗವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2018 ರಲ್ಲಿ ಖೇಲೋ ಇಂಡಿಯಾ ಅಭಿಯಾನವನ್ನು ಘೋಷಿಸಿದರು.

         ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನದಂದು, ಭಾರತ ಸರ್ಕಾರವು ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ, ಅರ್ಜುನ್ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ರಾಷ್ಟ್ರಪತಿ ಭವನದಲ್ಲಿ ಪ್ರತಿ ವರ್ಷ ಈ ಸಮಾರಂಭವನ್ನು ನಡೆಸಲಾಗುತ್ತಿದ್ದು, ಭಾರತದ ರಾಷ್ಟ್ರಪತಿಗಳು ಕ್ರೀಡಾಪಟುಗಳಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಾರೆ.

ಭಾರತದ ಹಾಕಿ ಮಾಂತ್ರಿಕ ಮೇಜರ್‌ ಧ್ಯಾನ್‌ ಚಂದ್ :
         ಮೇಜರ್ ಧ್ಯಾನ್ ಚಂದ್ ಭಾರತದಲ್ಲಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಹಾಕಿ ಕ್ರೀಡಾಪಟು ಎನಿಸಿಕೊಂಡಿದ್ದರು. ಆತನನ್ನು ಸರಿಗಟ್ಟುವ ಆಟಗಾರ ಇಂದಿನ ವರೆಗೂ ವರೆಗೂ ಯಾರು ಇಲ್ಲ ಎಂಬುದು ಅಚ್ಚರಿಯ ವಿಷಯವೇ ಸರಿ. ವಿಶ್ವಕಂಡ ಅಪರೂಪದ, ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಧ್ಯಾನ್‌ ಚಂದ್ ಪಾತ್ರರಾಗಿದ್ದರು.
 ಧ್ಯಾನ್‌ ಚಂದ್‌ ಅವರನ್ನು ಅಕ್ಕರೆಯಿಂದ 'ದಾದಾ' ಎಂದು ಕರೆಯಲಾಗುತ್ತಿತ್ತು. ದಾದಾ ಸಾಧನೆಗೆ ಕೈಗನ್ನಡಿಯೆಂಬಂತೆ 1956ನೇ ಇಸವಿಯಲ್ಲಿ ಭಾರತೀಯ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 1928, 1932 ಹಾಗೂ 1936ರಲ್ಲಿ ಭಾರತಕ್ಕೆ ಒಲಿಂಪಿಕ್ ಹಾಕಿ ಚಿನ್ನದ ಪದಕವನ್ನು ಗೆಲ್ಲಿಸಿಕೊಟ್ಟಿದ್ದರು. ಅಲ್ಲದೆ 400ಕ್ಕೂ ಹೆಚ್ಚು ಅಂತರಾಷ್ಟ್ರೀಯ ಗೋಲುಗಳನ್ನು ಸಿಡಿಸಿದ್ದರು

ಧ್ಯಾನ್‌ ಚಂದ್‌ ಆಟಕ್ಕೆ ಮನಸೋತ ಜರ್ಮನಿಯ ಹಿಟ್ಲರ್ :

1936ರ ಬರ್ಲಿನ್ ಒಲಿಂಪಿಕ್ಸ್ ವೇಳೆ ಧ್ಯಾನ್ ಚಂದ್ ಆಟ ನೋಡಿ ಬೆಕ್ಕಸ ಬೆರಗಾಗಿದ್ದ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್, ಮೇಜರ್ ಧ್ಯಾನ್‌ ಚಂದ್‌ ಅವರಿಗೆ ಜರ್ಮನ್ ಪೌರತ್ವ ಮತ್ತು ತಮ್ಮ ಸೇನೆಯಲ್ಲಿ ದೊಡ್ಡ ಹುದ್ದೆಯನ್ನು ನೀಡುವುದಾಗಿ ಘೋಷಿಸಿದ್ದರು. ಆದರೆ ಅಪ್ಪಟ್ಟ ದೇಶಪ್ರೇಮಿ ಧ್ಯಾನ್‌ ಚಂದ್ ಅದನ್ನು ನಯವಾಗಿಯೇ ನಿರಾಕರಿಸಿದ್ದರು.

ಒಲಂಪಿಕ್ಸ್‌ನಲ್ಲಿ 3 ಬಂಗಾರ ಪದಕ ತಂದು ಕೊಟ್ಟಿದ್ದ ಧ್ಯಾನ್ ಚಂದ್ :

ಒಂಲಪಿಕ್ಸ್‌ ಕ್ರೀಡಾಕೂಟದಲ್ಲಿ ಹಾಕಿ ಆಟದಲ್ಲಿ ಮೂರು ಬಾರಿ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಮೇಜರ್ ಧ್ಯಾನ್‌ ಚಂದ್‌ ನೇತೃತ್ವದ ಹಾಕಿ ತಂಡ ಯಶಸ್ವಿಯಾಗಿತ್ತು. 1928, 1932 ಹಾಗೂ 1936ರಲ್ಲಿ ಸತತ ಮೂರು ಭಾರತ ಹಾಕಿ ತಂಡ ಬಂಗಾರದ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿತ್ತು. ಇದರಲ್ಲಿ ಮೆಜರ್ ಧ್ಯಾನ್‌ ಚಂದ್‌ ಅವರ ಪಾತ್ರ ಬಹಳ ಪ್ರಮುಖವಾಗಿತ್ತು.

      ಹಾಕಿ ಮಾಂತ್ರಿಕ  ಮೇಜರ್ ಧ್ಯಾನ್‌ ಚಂದ್‌ ಅವರು 1948 ರಲ್ಲಿ ತಮ್ಮ ಕೊನೆಯ ಅಂತರಾಷ್ಟ್ರೀಯ ಹಾಕಿ ಪಂದ್ಯವನ್ನಾಡಿದ್ದರು. ಮೇಜರ್ ಧ್ಯಾನ್‌ ಚಂದ್ ಡಿಸೆಂಬರ್ 03, 1979 ರಲ್ಲಿ ಮರಣ ಹೊಂದಿದರು.

ನಮ್ಮ ರಾಷ್ಟ್ರ ಧ್ವಜದ ಬಗ್ಗೆ ನಮಗೆಷ್ಟು ಗೊತ್ತು?

   
 ಪ್ರಪಂಚದ ಪ್ರತಿಯೊಂದು ಸ್ವತಂತ್ರ ರಾಷ್ಟ್ರವು ತನ್ನದೇ ಆದ ಧ್ವಜವನ್ನು ಹೊಂದಿರುತ್ತದೆ. ಇದು ಸ್ವತಂತ್ರ ದೇಶದ ಸಂಕೇತವಾಗಿದೆ. ಹಾಗೆಯೇ ನಮ್ಮ ಭಾರತವು ಕೂಡ ತನ್ನದೆಯಾದ ರಾಷ್ಟ್ರ ಧ್ವಜವನ್ನು ಹೊಂದಿದೆ. ದೇಶಪ್ರೇಮದ ಸಂಕೇತವಾಗಿರುವ ನಮ್ಮ ಭಾರತದ ಈಗಿನ ರಾಷ್ತ್ರ ಧ್ವಜವನ್ನು  22 ಜುಲೈ 1947 ರಂದು ಸಂವಿಧಾನಾತ್ಮಕ ಸಮಿತಿ ಸಭೆಯಲ್ಲಿ  ಅಂಗೀಕರಿಸಲಾಯಿತು. 1947 ಆಗಸ್ಟ್ 15 ರಿಂದ ಸ್ವತಂತ್ರ ಭಾರತದ  ಬಾವುಟವಾಗಿಯೂ, 26 ಜನವರಿ 1950ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಹಾರಾಡುತಲಿದೆ. ಹಿಂದಿ ಭಾಷೆಯಲ್ಲಿ ತಿರಂಗಾ ಎಂದು, ಕನ್ನಡದಲ್ಲಿ ತ್ರಿವರ್ಣ – (ಮೂರು ವರ್ಣಗಳ ಧ್ವಜ) ಎಂದು ನಮ್ಮ ಭಾರತದ ಬಾವುಟವನ್ನು ಕರೆಯುವುದು ರೂಢಿ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ

☞ ಕೇಸರಿ :  ತ್ರಿವರ್ಣ ಧ್ವಜದಲ್ಲಿ ಮೇಲೆ ಇರುವ ಕೇಸರಿ ಬಣ್ಣ ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆಯುವ ಬಲಿದಾನಗಳ ಸಂಕೇತವಾಗಿದೆ.

☞ ಬಿಳಿ :  ಧ್ವಜದ ಮಧ್ಯೆ ಇರುವ ಬಿಳಿ ಬಣ್ಣ ಸತ್ಯ, ಶಾಂತಿ ಮತ್ತು ಶುದ್ಧತೆಯ ಸಂಕೇತವಾಗಿದೆ. ಆ ಮೂಲಕ ಶುದ್ಧ ಮನಸ್ಸಿನವರೊಡನೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತ ಬಿಳಿ.

 ಹಸಿರು :   ಕೆಳಗೆ ಇರುವ ಹಸಿರು ಬಣ್ಣ ಪ್ರಗತಿಯ ಸಂಕೇತವೂ ಹೌದು. ಜೊತೆಗೆ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಅವಿನಾಭಾವ ಸಂಬಂಧವನ್ನು ತಿಳಿಸುತ್ತದೆ. ವಿಶಾಲವಾದ ಈ ಪ್ರಕೃತಿಯಲ್ಲಿ ಮನುಷ್ಯ ಅತಿಥಿಯಷ್ಟೇ. ಹಾಗಾಗಿ ಪ್ರಕೃತಿಯೊಡನೆ ಬೆರೆತು ಹಚ್ಚ ಹಸಿರಿನ ಒಡಲಿಗೆ ತೊಂದರೆ ಉಂಟು ಮಾಡದೆ ಅದರ ಅಸ್ತಿತ್ವವನ್ನು ಕಾಪಾಡಿಕೊಂಡು ಬರಬೇಕು. ಜೊತೆಗೆ ಪ್ರಕೃತಿಯಲ್ಲಿರುವ ಸಕಲ ಜೀವರಾಶಿಯ ಜೊತೆ ಮನುಷ್ಯ ಬಾಂಧವ್ಯದಿಂದ ಇರಬೇಕು ಎನ್ನುವುದನ್ನು ಸೂಚಿಸುತ್ತದೆ.

 ಅಶೋಕ ಚಕ್ರ : ನಮ್ಮ ತ್ರಿವರ್ಣಧ್ವಜ ರೂಪುಗೊಂಡಿದ್ದು 1931ರಲ್ಲಿ. ಸ್ವಾತಂತ್ರ್ಯ ಪೂರ್ವದಲ್ಲಿ ತ್ರಿವರ್ಣ ಧ್ವಜದ ಮಧ್ಯೆ ಮಹಾತ್ಮ ಗಾಂಧೀಜಿ ಅವರ ಚರಕವನ್ನು ಅಳವಡಿಸಲಾಗಿತ್ತು. ಆದರೆ ನಂತರ ಜುಲೈ 22, 1947ರಲ್ಲಿ ಚರಕದ ಬದಲಾಗಿ ವೃತ್ತಾಕಾರದಲ್ಲಿರುವ ಅಶೋಕ ಚಕ್ರವನ್ನು ಬಳಸಿ, ಕೇಸರಿ ಬಿಳಿ ಹಸಿರು ಬಣ್ಣದ ಧ್ವಜದ ಮಧ್ಯೆ ಅಶೋಕಚಕ್ರ ಇರುವ ರಾಷ್ಟ್ರಧ್ವಜವನ್ನು ಸಂವಿಧಾನಬದ್ಧವಾಗಿ ಅಂಗೀಕರಿಸಲಾಯಿತು. ಅಶೋಕ ಚಕ್ರವು  ಸಾಮ್ರಾಟ್ ಅಶೋಕನ ಚಿಹ್ನೆಯಾಗಿದ್ದು, ರಾಷ್ಟ್ರಧ್ವಜದಲ್ಲಿರುವ ಈ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ ಆ ಚಕ್ರದ ಮಧ್ಯೆ ಇರುವ 24 ಅರಗಳು ಪ್ರಗತಿ ವಿವಿಧ ಆಚರಣೆ, ಸಂಸ್ಕೃತಿ, ವಿವಿಧತೆಯಂತಹ ಬಹುತ್ವವನ್ನು ಪ್ರತಿನಿಧಿಸುತ್ತದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ

 ದ್ವಜದ ಅಳತೆ - ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರಬೇಕು.

☞ ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ 24 ಅರಗಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ. ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ.

☞ ಧ್ವಜ ಕೇವಲ ಕೈ ನೇಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ  ಮಾಡಲ್ಪಟ್ಟಿರಬೇಕು ಹಾಗೂ ಧ್ವಜ ಕಟ್ಟುವ ಹಗ್ಗವೂ ಸಹ ಖಾದಿ ನೂಲಿನದಾಗಿರಬೇಕು.

ಕೇಸರಿ – ಬಿಳಿ – ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಚು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದೆ.

☞ ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ. ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.


ಧ್ವಜದ ತಯಾರಿ
ರಾಷ್ಟ್ರಧ್ವಜವನ್ನು ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ 24 ಅರಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು
ದೇಶಾದ್ಯಂತ ಇಂದು ರಾರಾಜಿಸುತ್ತಿರುವ ದೇಶದ ರಾಷ್ಟ್ರದ ಧ್ವಜದ ವಿನ್ಯಾಸ ಮಾಡಿದವರು ಸ್ವಾತಂತ್ರ್ಯ ಹೋರಾಟಗಾರ “ಪಿಂಗಾಳಿ ವೆಂಕಯ್ಯ”. 1876ರ ಆಗಸ್ಟ್ 2ರಂದು ಆಂಧ್ರಪ್ರದೇಶದ(ಈಗಿನ) ಮಚಿಲಿಪಟ್ಟಣಂ ಸಮೀದಪ ಭಟ್ಲಾಪೆನುಮರ್ರು ಎಂಬಲ್ಲಿ  ಜನಿಸಿದರು.

ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವ ಘೋಷಿತ ನೂರಾರು ರಾಷ್ಟ್ರಧ್ವಜಗಳನ್ನು ಬಳಸಲಾಗಿತ್ತು. ಕೊನೆಗೆ ಸ್ಪಷ್ಟ ಹಾಗೂ ಅಧಿಕೃತ ವಿನ್ಯಾಸದ ಧ್ವಜ 1947ರಲ್ಲಿ ರೂಪತಳೆದಿತ್ತು. ಪಿಂಗಾಳಿ ವೆಂಕಯ್ಯ ಅವರ ವಿನ್ಯಾಸದಲ್ಲೇ ಸ್ವಲ್ಪ ಬದಲಾವಣೆ ಮಾಡಿ 1947ರಲ್ಲಿ ಅಂಗೀಕರಿಸಲಾಯಿತು.


ತ್ರಿವರ್ಣ ಧ್ವಜದ ಏಕೈಕ ಉತ್ಪಾದಕ ಘಟಕ

 ಈ ರಾಷ್ಟ್ರಧ್ವಜವನ್ನು ಯಾರೂ ಬೇಕಾದರೂ ತಯಾರಿಸಲು ಸಾಧ್ಯವಿಲ್ಲ.  ರಾಷ್ಟ್ರಧ್ವಜಕ್ಕಾಗಿ ಕೈಯಿಂದ ನೇಯ್ದ ಖಾದಿಯನ್ನು ಆರಂಭದಲ್ಲಿ ಕರ್ನಾಟಕದ ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಗರಗ ಎಂಬ ಸಣ್ಣ ಹಳ್ಳಿಯಲ್ಲಿ ತಯಾರಿಸಲಾಯಿತು. ಧಾರವಾಡ ತಾಲೂಕು ಕ್ಷೇತ್ರೀಯ ಸೇವಾ ಸಂಘದ ಬ್ಯಾನರ್‌ನಡಿಯಲ್ಲಿ 1954 ರಲ್ಲಿ ಗರಗ ನಲ್ಲಿ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಕೇಂದ್ರವನ್ನು ಸ್ಥಾಪಿಸಿದರು ಮತ್ತು ಧ್ವಜಗಳನ್ನು ತಯಾರಿಸಲು ಕೇಂದ್ರದ ಪರವಾನಗಿಯನ್ನು ಪಡೆದರು.

 ನಂತರದಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ ಎಂಬಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ(ಕೆಕೆಜಿಎಸ್‌ಎಸ್) ಇಡೀ ದೇಶದಲ್ಲಿಯೇ ಭಾರತೀಯ ಧ್ವಜ ತಯಾರಿಸುವಂತಹ ಏಕೈಕ ಉತ್ಪಾದನಾ ಮತ್ತು ಸರಬರಾಜು ಮಾಡುವ  ಕೇಂದ್ರವನ್ನಾಗಿ ಪ್ರಮಾಣೀಕರಿಸಲಾಗಿದೆ. ಈಗ ಗರಗದಲ್ಲಿ ಧ್ವಜ ತಯಾರಿಸಲು ಬೇಕಾದ ಬಟ್ಟೆ ನೆಯ್ಗೆಯ ಕೆಲಸ ಮಾತ್ರ ನಡೆಯುತ್ತಿದೆ.

 ಧ್ವಜಗಳಲ್ಲಿ ಯಾವುದೇ ದೋಷಗಳು, ಉದಾಹರಣೆಗೆ ಬಣ್ಣ, ಗಾತ್ರ ಮತ್ತು ನೂಲುಗಳಲ್ಲಿ ಯಾವುದಾದರೂ ತಪ್ಪಾದರೆ ಅದನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ಫ್ಲ್ಯಾಗ್ ಕೋಡ್ 2002 ರ ನಿಬಂಧನೆಗಳ ಪ್ರಕಾರ ದಂಡ ಅಥವಾ ಸೆರೆವಾಸ ಅನುಭವಿಸಬೇಕಾಗುತ್ತದೆ.

 ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಮತ್ತು ಭಾರತೀಯ ಸ್ಟ್ಯಾಂಡರ್ಡ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜ ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನ(ರಾಷ್ಟ್ರಧ್ವಜ) ತಿರಸ್ಕೃತವಾಗುತ್ತದೆ.

ರಾಷ್ಟ್ರ ಧ್ವಜ ಸರಿಯಾಗಿ ಪ್ರದರ್ಶನ ಮಾಡುವ ವಿಧಾನಗಳು

ಧ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.

ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ 'ಜನಗಣ ಮನ' ವನ್ನು ಹಾಡಲೇಬೇಕು.

ಧ್ವಜ ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ  ನಿಧಾನಗತಿಯಲ್ಲಿ ಇಳಿಸಬೇಕು.

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.

ರಾಷ್ಟ್ರ ಧ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.

ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರ ಧ್ವಜವನ್ನು   ಹಾರಿಸಬಹುದು.

ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ಧ್ವಜವನ್ನು ಕಾಪಾಡಬೇಕು.

ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು. 

ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರಧ್ವಜ ಹಾರಾಡತಕ್ಕದ್ದು.

ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರಧ್ವಜ ಹಾರಿಸಬಹುದು.

ರಾಷ್ಟ್ರಧ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು. 
          ತಾಯಿ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ಧ್ವಜ ಸಂಹಿತೆ
ಜನವರಿ 26, 2002 ರಂದು, ಭಾರತೀಯ ಧ್ವಜ ಸಂಹಿತೆಯನ್ನು ಮಾರ್ಪಡಿಸಲಾಯಿತು ಮತ್ತು ಸ್ವಾತಂತ್ರ್ಯವಾದ ಹಲವಾರು ವರ್ಷಗಳ ನಂತರ, ಭಾರತದ ನಾಗರಿಕರು ಅಂತಿಮವಾಗಿ ತಮ್ಮ ಮನೆಗಳು, ಕಚೇರಿಗಳು ಮತ್ತು ಕಾರ್ಖಾನೆಗಳ ಮೇಲೆ ಭಾರತೀಯ ಧ್ವಜವನ್ನು ಯಾವುದೇ ದಿನದಲ್ಲಿ ಹಾರಿಸಲು ಅನುಮತಿಸಲಾಯಿತು. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವವನ್ನು ತಪ್ಪಿಸಲು ಧ್ವಜ ಸಂಹಿತೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವವರೆಗೆ ಈಗ ಭಾರತೀಯರು ಎಲ್ಲಿಯವರೆಗೆ ಮತ್ತು ಯಾವುದೇ ಸಮಯದಲ್ಲಿ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಬಹುದು. ಅನುಕೂಲಕ್ಕಾಗಿ, ಭಾರತದ ಧ್ವಜ ಸಂಹಿತೆ, 2002 ಅನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. 
ಕೋಡ್‌ನ ಭಾಗ I ರಾಷ್ಟ್ರೀಯ ಧ್ವಜದ ಸಾಮಾನ್ಯ ವಿವರಣೆಯನ್ನು ಒಳಗೊಂಡಿದೆ. 
ಕೋಡ್‌ನ ಭಾಗ II ಅನ್ನು ಸಾರ್ವಜನಿಕ, ಖಾಸಗಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳ ಸದಸ್ಯರು ರಾಷ್ಟ್ರಧ್ವಜದ ಪ್ರದರ್ಶನಕ್ಕೆ ಮೀಸಲಿಡಲಾಗಿದೆ.
ಕೋಡ್‌ನ ಭಾಗ III ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಅವರ ಸಂಸ್ಥೆಗಳು ಮತ್ತು ಏಜೆನ್ಸಿಗಳಿಂದ ರಾಷ್ಟ್ರಧ್ವಜದ ಪ್ರದರ್ಶನಕ್ಕೆ ಸಂಬಂಧಿಸಿದೆ. 
         26 ಜನವರಿ 2002 ಶಾಸನದ ಆಧಾರದ ಮೇಲೆ ಧ್ವಜವನ್ನು ಹೇಗೆ ಹಾರಿಸಬೇಕು ಎಂಬುದರ ಕುರಿತು ಕೆಲವು ನಿಯಮಗಳು ಮತ್ತು ನಿಬಂಧನೆಗಳು  ಈ ಕೆಳಗಿನಂತಿವೆ. 

ಮಾಡಬೇಕಾದವುಗಳು: 
ಧ್ವಜದ ಗೌರವವನ್ನು ಪ್ರೇರೇಪಿಸಲು ಶಿಕ್ಷಣ ಸಂಸ್ಥೆಗಳಲ್ಲಿ (ಶಾಲೆಗಳು, ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ ಶಿಬಿರಗಳು, ಇತ್ಯಾದಿ) ರಾಷ್ಟ್ರಧ್ವಜವನ್ನು ಹಾರಿಸಬಹುದು. ಶಾಲೆಗಳಲ್ಲಿ ಧ್ವಜಾರೋಹಣದಲ್ಲಿ ಪ್ರತಿಜ್ಞಾವಿಧಿಯನ್ನು ಸೇರಿಸಲಾಗಿದೆ. 

ಸಾರ್ವಜನಿಕ, ಖಾಸಗಿ ಸಂಸ್ಥೆ ಅಥವಾ ಶಿಕ್ಷಣ ಸಂಸ್ಥೆಯ ಸದಸ್ಯರು ಎಲ್ಲಾ ದಿನಗಳು ಮತ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಬಹುದು/ಪ್ರದರ್ಶಿಸಬಹುದು, ವಿಧ್ಯುಕ್ತ ಅಥವಾ ರಾಷ್ಟ್ರಧ್ವಜದ ಘನತೆ ಮತ್ತು ಗೌರವಕ್ಕೆ ಅನುಗುಣವಾಗಿರಬೇಕು. 

ಹೊಸ ಕೋಡ್‌ನ ವಿಭಾಗ 2 ಎಲ್ಲಾ ಖಾಸಗಿ ನಾಗರಿಕರು ತಮ್ಮ ಆವರಣದಲ್ಲಿ ಧ್ವಜವನ್ನು ಹಾರಿಸುವ ಹಕ್ಕನ್ನು ಒಪ್ಪಿಕೊಳ್ಳುತ್ತದೆ. 

ಮಾಡಬಾರದ್ದು: 
ಧ್ವಜವನ್ನು ಸಾಮುದಾಯಿಕ ಲಾಭಕ್ಕಾಗಿ, ಡ್ರೆಪರಿ ಅಥವಾ ಬಟ್ಟೆಗಾಗಿ ಬಳಸಲಾಗುವುದಿಲ್ಲ. ಸಾಧ್ಯವಾದಷ್ಟು, ಹವಾಮಾನವನ್ನು ಲೆಕ್ಕಿಸದೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅದನ್ನು ಹಾರಿಸಬೇಕು.

ಧ್ವಜವನ್ನು ಉದ್ದೇಶಪೂರ್ವಕವಾಗಿ ನೆಲ ಅಥವಾ ನೆಲವನ್ನು ಸ್ಪರ್ಶಿಸಲು ಅಥವಾ ನೀರಿನಲ್ಲಿ ಜಾಡು ಮಾಡಲು ಅನುಮತಿಸಲಾಗುವುದಿಲ್ಲ. ವಾಹನಗಳು, ರೈಲುಗಳು, ದೋಣಿಗಳು ಅಥವಾ ವಿಮಾನಗಳ ಹುಡ್, ಮೇಲ್ಭಾಗ ಮತ್ತು ಬದಿಗಳಲ್ಲಿ ಅಥವಾ ಹಿಂಭಾಗದಲ್ಲಿ ಅದನ್ನು ಆವರಿಸಲಾಗುವುದಿಲ್ಲ.

ಧ್ವಜಕ್ಕಿಂತ ಎತ್ತರದಲ್ಲಿ ಬೇರೆ ಯಾವುದೇ ಧ್ವಜ ಅಥವಾ ನಿಶಾನೆಯನ್ನು ಇರಿಸುವಂತಿಲ್ಲ. ಅಲ್ಲದೆ, ಹೂವುಗಳು ಅಥವಾ ಹೂಮಾಲೆಗಳು ಅಥವಾ ಲಾಂಛನಗಳು ಸೇರಿದಂತೆ ಯಾವುದೇ ವಸ್ತುವನ್ನು ಧ್ವಜದ ಮೇಲೆ ಅಥವಾ ಮೇಲೆ ಇರಿಸಲಾಗುವುದಿಲ್ಲ. ತ್ರಿವರ್ಣ ಧ್ವಜವನ್ನು ಮಾಲೆ, ರೋಸೆಟ್ ಅಥವಾ ನಿಶಾನೆಯಾಗಿ ಬಳಸಲಾಗುವುದಿಲ್ಲ.

ನೇತಾಜಿ ಸುಭಾಷ್‌ ಚಂದ್ರ ಬೋಸ್‌.

[ ಜನವರಿ 23, 1897 — ಮರಣ (ಮಾಹಿತಿ ಇಲ್ಲ)]
            'ನೀವು ನನಗೆ ರಕ್ತ ಕೊಡಿ... ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ...' ಎಂಬ ಮಾತು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ತುಂಬಿರುವಂತದಹದು. ಅಂದು ಸಿಡಿಲಬ್ಬರದ ಈ ಮಾತು ಕೇಳಿದ್ದ ಪ್ರತಿಯೊಬ್ಬರಲ್ಲೂ ದೇಶ ಪ್ರೇಮದ ಕಿಚ್ಚು ಜಾಗೃತವಾಗುತ್ತಿತ್ತು. ಈ ಮಾತನ್ನಾಡಿದವರು ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲೇಬೇಕೆಂದು ಪಣ ತೊಟ್ಟಿದ್ದ ನೇತಾಜಿ ಅಂದಿನ ಬ್ರಿಟಿಷ್ ಸರ್ಕಾರಕ್ಕೆ ತನ್ನ ಪ್ರಖರ ನಿಲುವುಗಳಿಂದಲೇ ಬಿಸಿ ಮುಟ್ಟಿಸಿದ್ದರು.

                      ನೇತಾಜಿ (ಗೌರವಾನ್ವಿತ ನಾಯಕ) ಎಂದೇ ಜನತೆಯಿಂದ ಕರೆಸಿಕೊಳ್ಳುತ್ತಿದ್ದ ಬೋಸ್ ಇಂದಿನ ಒಡಿಶಾ (ಹಿಂದಿನ ಒರಿಸ್ಸಾ) ರಾಜ್ಯದ ಮತ್ತು ಕಟಕ್ ನಗರದಲ್ಲಿ ಜನವರಿ 23, 1897 ರಂದು ಜನಿಸಿದರು. ತಂದೆ ಜಾನಕಿನಾಥ್‌ ಬೋಸ್‌, ತಾಯಿ ಪ್ರಭಾವತೀ ದೇವಿ. ತಮ್ಮ ಹದಿನೈದನೆಯ ವಯಸ್ಸಿನಲ್ಲಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳಿಂದ ಪ್ರಭಾವಿತರಾದರು. 1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು, ಈ ಮಗ ಒಬ್ಬ ಶೌರ್ಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದನು, ಅವನು ತನ್ನ ಜೀವನವನ್ನು ಒಂದು ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟನು- ಅದು ಭಾರತದ ಸ್ವಾತಂತ್ರ್ಯ. ನಾನು ಹೇಳುತ್ತಿರುವ ವ್ಯಕ್ತಿ ನೇತಾಜಿ ಸುಭಾಷ್ ಚಂದ್ರ ಬೋಸ್.

              1919ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿ.ಎ. ಪದವಿ ಪಡೆದು ನಂತರ 1919ರ ಸೆಪ್ಟೆಂಬರ್ 15ರಂದು ಐ.ಸಿ.ಎಸ್ ಪರೀಕ್ಷೆಗಾಗಿ ಇಂಗ್ಲೆಂಡಿಗೆ ಪ್ರಯಾಣ ಬೆಳೆಸಿ, 1920ರ ಸೆಪ್ಟಂಬರ್‌ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪಡೆದರು.  ಆದರೆ ವಿದೇಶಿ ಗುಲಾಮಗಿರಿ ಅಡಿಯಲ್ಲಿ ಕೆಲಸ ಮಾಡಲು ಒಪ್ಪದ ಬೋಸ್‌ ಐಸಿಎಸ್‌ ಪದವಿ ಧಿಕ್ಕರಿಸಿ 1921ರಲ್ಲಿ ಸ್ವದೇಶಕ್ಕೆ ಮರಳಿ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು.  

                       ನೇತಾಜಿ ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ ಹೊರಹೊಮ್ಮಿದ್ದರು. `ಆಜಾದ್ ಹಿಂದ್ ಪೌಜ್' (ಇಂಡಿಯನ್ ನ್ಯಾಷನಲ್ ಆರ್ಮಿ - ಐಎನ್‌ಎ) ಎಂಬ ಸೇನೆಯನ್ನು ಕಟ್ಟಿದ ಸುಭಾಷ್ ಚಂದ್ರ ಬೋಸ್ ಕ್ರಾಂತಿಕಾರಿ ನಿಲುವಿನ ನಾಯಕರಾಗಿ ಹೊರಹೊಮ್ಮಿದ್ದರು. ಅಪ್ರತಿಮ ದೇಶಭಕ್ತರಾಗಿದ್ದ ಬೋಸ್ ವಿದೇಶದಲ್ಲೂ ಸ್ವಾತಂತ್ರ್ಯ ಹೋರಾಟವನ್ನು ಸಂಘಟಿಸಿದ್ದರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶ ವಿದೇಶದಲ್ಲಿ ಸುತ್ತಾಡಿದ ಸುಭಾಷ್ ಚಂದ್ರ ಬೋಸ್ ಅವರು ಬ್ರಿಟಿಷರಿಗೇ ಸಿಂಹಸ್ವಪ್ನವಾಗಿ ಕಾಡಿದ್ದರು. ತಮ್ಮ ಪ್ರಖರ ಚಿಂತನೆಯ ಮೂಲಕವೇ ಎಲ್ಲರ ಮನಸ್ಸು ಗೆದ್ದಿದ್ದ ನೇತಾಜಿ, ತಮ್ಮ ದೇಶ ಪ್ರೇಮದ ಕಿಚ್ಚಿನಿಂದಲೇ ಆಗಸದೆತ್ತಕ್ಕೆ ಬೆಳೆದಿದ್ದರು.

          ಗಾಂಧೀಜಿಯವರ ಜೊತೆಗೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಗಾಂಧೀಜಿಯವರ ನಿಲುವನ್ನು ಒಪ್ಪಿಕೊಂಡಿದ್ದರೂ ಕೆಲವೊಮ್ಮೆ ತಾವು ಒಪ್ಪದ ವಿಚಾರಗಳನ್ನು ನೇರವಾಗಿ ಪ್ರತಿಭಟಿಸಿ ಗಾಂಧೀಜಿಯವರಿಗೇ ಎದುರಾಳಿಯಾಗಿದ್ದರು. ಗಾಂಧೀಜಿ ಅಹಿಂಸೆಯಿಂದ ಬ್ರಿಟಿಷರನ್ನು ಗೆಲ್ಲುವ ಬಗ್ಗೆ ಒಲವು ತೋರಿದ್ದರೆ ಇದಕ್ಕೆ ಪೂರ್ಣ ವ್ಯತಿರಿಕ್ತವಾಗಿ ಬೋಸ್ ಅವರು ಸ್ವಾತಂತ್ರ್ಯದ ಬಗ್ಗೆ ಉಗ್ರಗಾಮಿ ವಿಧಾನ ಮತ್ತು ಸಮಾಜವಾದಿ ನೀತಿಗಳಿಗೆ ಮುಂದಾಗಿದ್ದರು.  

                   ಕಾಂಗ್ರೆಸ್ ತ್ಯಜಿಸಿ ಕ್ರಾಂತಿಯ ಮಾರ್ಗದಲ್ಲಿ ಸಾಗಿದ ಬೋಸರನ್ನು ಜೈಲಿಗೆ, ಗೃಹ ಬಂಧನಕ್ಕೆ ತಳ್ಳಿದ ಆಂಗ್ಲರು. ಗೃಹ ಬಂಧನದಿಂದ ಮಾಯವಾದ ಬೋಸರು ಜರ್ಮನಿಯಿಂದ ಜಪಾನಿನವರೆಗು, ಹಿಟ್ಲರ್ ನಿಂದ ಮುಸೊಲಿನಿವರೆಗೂ ಸುತ್ತಾಡಿ ಕ್ರಾಂತಿಕಾರಿ ಭಾರತೀಯ ರಾಷ್ಟ್ರೀಯ ಸೇನೆಯನ್ನು ಕಟ್ಟಿ ಬ್ರಿಟಿಷ್ ಆಡಳಿತದ ವಿರುದ್ಧ ಸಮರ ಸಾರಿದರು. ಪ್ರಾದೇಶಿಕ ಸರ್ಕಾರ ಸ್ಥಾಪಿಸಿ ಅದರ ಪ್ರಧಾನಿ ಆಗು ಸೈನ್ಯದ ಮಹಾದಂಡನಾಯಕರಾದರು. ಇಲ್ಲಿ ಶಾಂತಿ ಮಂತ್ರ ಜಪಿಸುತ್ತಾ ಕಾಲಹರಣ ಮಾಡುತ್ತಿದ್ದರೆ ಅಲ್ಲಿ ಅಖಂಡ ಭಾರತದ ಕನಸು ಹೊತ್ತು ಅಂಗ್ಲಾರೆದುರು ಸೈನ್ಯ ನುಗ್ಗಿಸಿದರು .ಬರ್ಮಾ ಅಂಡಮನುಗಳಲ್ಲಿ ತ್ರಿವರ್ಣ ಧ್ವಜವನ್ನು ಏರಿಸಿ ಸ್ವಾತಂತ್ರ್ಯದ ಮೊದಲ ಸ್ವಾದ ಸವಿದರು. ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೀಗುತಿದ್ದ ಆಂಗ್ಲರಿಗೆ ಸೋಲಿನ ರುಚಿ ತೋರಿಸಿದರು. ಜಪಾನಿನ ಶರಣಾಗತಿಯ ಕಾರಣ ಹಿನ್ನೆಡೆ ಉಂಟಾಯಿತು.

                   ದೇಶ ಸ್ವಾತಂತ್ರ್ಯ ಗಳಿಸುವ ಕೊನೆ ಘಟ್ಟದಲ್ಲಿ ಅಂದರೆ 1945ರಲ್ಲಿ ನೇತಾಜಿ ವಿಮಾನ ದುರಂತದಲ್ಲಿ ಮಡಿದರು ಎಂದು ಅನೇಕರು ನಂಬಿದ್ದಾರೆ. ಆದರೆ, ಅವರು ಅಂದು ಸಾಯಲೇ ಇಲ್ಲ ಎಂಬುದು ಇನ್ನೊಂದು ವಾದ. ಬಹುತೇಕರು ಭಾವಿಸಿದಂತೆ ನೇತಾಜಿ ವಿಮಾನ ದುರಂತದಲ್ಲಿ ಮಡಿದರೋ ಅಥವಾ ಗುಮ್ನಾಮಿ ಬಾಬಾ ರೂಪ ಧರಿಸಿ 1980ರ ದಶಕದವರೆಗೂ ಬದುಕಿದ್ದರೋ ಎನ್ನುವ ಪ್ರಶ್ನೆಗೆ ಇಂದಿಗೂ ಸ್ಪಷ್ಟಉತ್ತರ ಸಿಕ್ಕಿಲ್ಲ. ನೇತಾಜಿ ಸಾವಿನ ನಿಗೂಢ ಭೇದಿಸುವುದಕ್ಕಾಗಿಯೇ ನೇಮಕಗೊಂಡಿದ್ದ  ವಿಷ್ಣು ಸಾಹಿ ಸಮಿತಿ ಕೂಡ ಈ ವಿಚಾರದಲ್ಲಿ ತಾರ್ಕಿಕ ಅಂತ್ಯ ನೀಡುವಲ್ಲಿ ವಿಫಲಗೊಂಡಿದೆ.

                         ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬ್ರಿಟಿಷರ ವಿರುದ್ಧ ವೀರ ಹೋರಾಟ ನಡೆಸಿ ಅಮರರಾದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು (2022)ದೇಶಾದ್ಯಂತ 'ಪರಾಕ್ರಮ್ ದಿವಸ್' ಆಗಿ ಆಚರಿಸಲಾಗುತ್ತಿದೆ. ಈ ದಿನವನ್ನು ಇನ್ನುಮುಂದೆ ‘ಪರಾಕ್ರಮ ದಿನ’ ಎಂದು ದೇಶಾದ್ಯಂತ ಆಚರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅಲ್ಲದೆ, ಹೌರಾ-ಕಲ್ಕಾ ಮೈಲ್‌ ರೈಲಿಗೆ ‘ನೇತಾಜಿ ಎಕ್ಸ್‌ಪ್ರೆಸ್‌’ ಎಂದೂ ಮರುನಾಮಕರಣ ಮಾಡಿದೆ.

:ನೇತಾಜಿಯವರ ಸಂದೇಶಗಳು:

=> ನನಗೆ ರಕ್ತ ನೀಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ.

=> ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಬಹುದೊಡ್ಡ ಅಪರಾಧ

=> ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆದುಕೊಳ್ಳಬೇಕು.

=> ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.

=> ಭಾರತದ ಮೇಲೆ ಇಟ್ಟಿರುವ ನಂಬಿಕೆಯನ್ನು ಯಾವತ್ತೂ ಕಳೆದುಕೊಳ್ಳಬೇಡಿ. ಭಾರತವನ್ನು ಬಂಧನದಲ್ಲಿಡುವ ಯಾವ ಶಕ್ತಿಯೂ ಭೂಮಿಯಲ್ಲಿ ಇಲ್ಲ. ಶೀಘ್ರದಲ್ಲೇ ಭಾರತ ಸ್ವತಂತ್ರವಾಗಲಿದೆ.

=> ನಮ್ಮ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ವಾತಂತ್ರ್ಯವೊಂದೇ ಪರಿಹಾರ. ಗುಲಾಮಿತನದ ಸಂಕೋಲೆಯನ್ನು ಕಿತ್ತೆಸೆಯಲು ಒಂದೇ ಹೃದಯ, ಒಂದು ಪ್ರಾಣವಾಗಿ ಎಲ್ಲರೂ ಕಟಿಬದ್ಧರಾಗಬೇಕಾಗಿದೆ.

ಮಹಾನ್ ಕ್ರಾಂತಿಕಾರಿ - ಭಗತ್ ಸಿಂಗ್

 
      ಸನ್ಮಾನ್ಯ ಅಧ್ಯಕ್ಷರೇ ಮುಖ್ಯ ಅತಿಥಿಗಳೇ ಹಾಗೂ ನನ್ನ ನೆಚ್ಚಿನ ಗುರು ಬಳಗವೇ ಊರಿನ ಪ್ರಮುಖರೇ,  ಮತ್ತು ನನ್ನ ಸಹೋದರ ಸಹೋದರಿಯರೇ ನಿಮ್ಮೆಲ್ಲರ ಎದುರಿಗೆ ಸ್ವಾತಂತ್ರ್ಯ ದಿನದ ನಿಮಿತ್ಯ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಮಹಾನ್ ಕ್ರಾಂತಿಕಾರಿಯ ಕುರಿತು ಕೆಲವು ಕ್ರಾಂತಿಕಾರಕ ವಿಚಾರಗಳನ್ನು ಹೇಳಬಯಸುತ್ತೇನೆ.

         ಒಬ್ಬ ಚಿಕ್ಕ ಬಾಲಕ ಅವನ ಚಿಕ್ಕಪ್ಪನ ಜೊತೆ ಹೊಲಗಳ ಮಧ್ಯ ನಡೆದು ಹೋಗುವಾಗ, ಹೊಲದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತನನ್ನು ಕಂಡ ಆ ಬಾಲಕ ಅವರ ಕಡೆಗೆ ಹೊರಟನು, ಆದರೆ ಚಿಕ್ಕಪ್ಪ ಬಾಲಕ ಹಿಂದೆ ಬರುತ್ತಿದ್ದಾನೆ ಎಂದು ಭಾವಿಸಿ ಹಾಗೆ ಮುಂದೆ ಸಾಗಿದ್ದರು. ಸ್ವಲ್ಪ ಮುಂದೆ ಹೋಗಿ ತಿರುಗಿ ನೋಡಿದಾಗ ಆ ಚಿಕ್ಕ ಬಾಲಕ ಕಾಣದಿದ್ದಾಗ ಮರಳಿ ಬಂದು ನೋಡಿದರೆ ಆ ಬಾಲಕ ರೈತನ ಜೊತೆ ಇರುವುದು ಕಾಣಿಸಿತು, ಅದನ್ನು ಕಂಡ ಅವರ ಚಿಕ್ಕಪ್ಪ ಏಕೆ ಮಗು ಇಲ್ಲೇನು ಮಾಡುತ್ತಿದ್ದೀಯಾ ಎಂದು ಪ್ರಶ್ನಿಸಿದ, ಆಗ ಬಾಲಕ ಚಿಕ್ಕಪ್ಪನನ್ನು ಈ ರೀತಿಯಾಗಿ ಮರು ಪ್ರಶ್ನಿಸಿದ ಭತ್ತದ ಸಸಿಗಳನ್ನು ನಾಟಿ ಮಾಡುವುದರಿಂದ  ರಾಶಿ ರಾಶಿ ಭತ್ತವನ್ನು ಪಡೆಯಬಹುದಲ್ಲ ಚಿಕ್ಕಪ್ಪ? ಎಂದು. ಆಗ ಚಿಕ್ಕಪ್ಪ ಹೌದು ಕಂದ ಏನಾಯ್ತು ಈಗ ಎಂದು ಕೇಳಿದ. ಆಗ ಬಾಲಕ ಭತ್ತದ ರೀತಿಯಲ್ಲಿ ನಾನು ಈಗ ಹೊಲದಲ್ಲಿ ಬಂದೂಕನ್ನು ನಾಟಿ ಮಾಡಿ ರಾಶಿ ರಾಶಿ ಬಂದೂಕು ಬೆಳೆಯಬಹುದಲ್ಲಾ ಎಂದು ಕೇಳಿದ. ಇದನ್ನು ಕೇಳಿದ ಚಿಕ್ಕಪ್ಪ ಬಂದೂಕುಗಳನ್ನು ನೀನೆನು ಮಾಡುವೆ? ಎಂದರು. ಬಾಲಕ ಆಗ ಬಂದೂಕುಗಳನ್ನು ನನ್ನ ದೇಶದವರಿಗೆ ನೀಡಿ ಬ್ರಿಟಿಷರನ್ನ ಭಾರತದಿಂದ ಓಡಿಸಲು ಸಹಾಯ ಮಾಡುತ್ತೇನೆ ಎಂದು  ಹೇಳಿದ. ಈ ರೀತಿಯಲ್ಲಿ ಚಿಕ್ಕ ಬಾಲಕನಾಗಿದ್ದಾಗಲೇ ದೇಶಾಭಿಮಾನವನ್ನು ಹೊಂದಿರುವ ವ್ಯಕ್ತಿ ಬೇರೆ ಯಾರು ಅಲ್ಲ ಅವರೇ 'ಭಗತ್ ಸಿಂಗ್'.

    'ಪಂಜಾಬಿನ ಪುರುಷ ಸಿಂಹ' ಮತ್ತು 'ಕ್ರಾಂತಿಯ ಕಿಡಿ' ಬ್ರಿಟಿಷರ ಎದೆ ನಡುಗಿಸಿದ ಈ ಭಗತ್ ಸಿಂಗ್ ಸೆಪ್ಟೆಂಬರ್ 27,  1907 ರಂದು ಪಂಜಾಬಿನ ಕೇತರ್ ಕರ್ ಗ್ರಾಮದಲ್ಲಿ ಕಿಶನ್ ಸಿಂಗ್ ಮತ್ತು ವಿದ್ಯಾವತಿ ದಂಪತಿಗಳ ಮಗನಾಗಿ ಜನಿಸಿದರು.

      12ನೇ ವಯಸ್ಸಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಅಂದರೆ 1919 ರಲ್ಲಿ ಜಲಿಯನ್ ವಾಲಾಬಾಗ್ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಭಗತ್ ಸಿಂಗ್ ಅಲ್ಲಿನ ರಕ್ತಸಿಕ್ತ ಮಣ್ಣನ್ನು ಸೀಸೆಯಲ್ಲಿ ಪವಿತ್ರ ಸಂಕೇತವಾಗಿ ಇಟ್ಟುಕೊಂಡು ಪೂಜಿಸುತ್ತಿದ್ದರು. ಈ ದುರಂತ ಭಗತ್ ಸಿಂಗರ ಮೇಲೆ ಗಾಢ ಪ್ರಭಾವ ಬೀರಿ ಕೊನೆಗೆ ಶಾಲೆ ಬಿಟ್ಟು ಕ್ರಾಂತಿಕಾರಿಗಳ ಜೊತೆಗೂಡಿ, ಕ್ರಾಂತಿಕಾರಿ ಸಂಘ ಒಂದನ್ನು ಆರಂಭಿಸಿದರು.

ಮುಂದೆ ಬ್ರಿಟಿಷರ ವಿರುದ್ಧದ ಹತ್ತು ಹಲವಾರು ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ಭಾಗವಹಿಸಿ, 1,931 ಮಾರ್ಚ್ 23ರಂದು ಭಗತ್ ಸಿಂಗ್ ರನ್ನು ರಾಜಗುರು ಮತ್ತು ಸುಖದೇವರೊಂದಿಗೆ ಬ್ರಿಟಿಷ್ ಸರ್ಕಾರ ಗಲ್ಲಿಗೇರಿಸಿತು. 

    ದೆಹಲಿಯ ಕೇಂದ್ರ ಶಾಸನ ಸಭೆಯಲ್ಲಿ 2 ಬಾಂಬ್ ಗಳನ್ನು ಎಸೆದು 'ಇನ್ ಕ್ವಿಲಾಬ್ ಜಿಂದಾಬಾದ್' (ಕ್ರಾಂತಿ ಚಿರಾಯುವಾಗಲಿ) ಎಂದು ಪೋಷಣೆ ಕೂಗುತ್ತಾ ಬ್ರಿಟಿಷ್ ಪೊಲೀಸರಿಗೆ ಶರಣಾದರು. ಆದರೆ ಬಾಂಬ್ ಎಸೆತದಿಂದ ಯಾವುದೇ ಸಾವುನೋವು ಆಗಿರಲಿಲ್ಲ. ಬ್ರಿಟಿಷರ ಗಮನ ಸೆಳೆದು ಸತ್ಯ ಹುಡುಕುವುದೇ ಭಗತ್, ಮತ್ತು ಅವರ ಗೆಳೆಯರ ಉದ್ದೇಶವಾಗಿತ್ತು.

   'ಇನ್ ಕ್ವಿಲಾಬ್ ಜಿಂದಾಬಾದ್' (ಕ್ರಾಂತಿ ಚಿರಾಯುವಾಗಲಿ) ಘೋಷಣೆ ಹುಟ್ಟು ಹಾಕಿದ್ದೇ ಭಗತ್ ಸಿಂಗ್. ಇದು ಅಂತಿಮವಾಗಿ ಭಾರತದ ಸಶಸ್ತ್ರ ಸ್ವಾತಂತ್ರ್ಯ ಹೋರಾಟದ ಘೋಷಣೆಯಾಗಿ ಮಾರ್ಪಟ್ಟಿತು.

ಬ್ರಿಟಿಷ್ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿದ ಆರೋಪದ ಮೇಲೆ ಅವರಿಗೆ ನೇಣು ಶಿಕ್ಷೆ ವಿಧಿಲಾಗಿತ್ತು. ಮಾರ್ಚ್ 24, 1931ರಂದು ಅವರನ್ನು ನೇಣಿಗೇರಿಸುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಸಿಂಗ್ ಗೆ ವಿಧಿಸಿರುವ ಶಿಕ್ಷೆಯನ್ನು ರದ್ಧು ಮಾಡಬೇಕೆಂದು ಲಾಹೋರ್ ಸೆಂಟ್ರಲ್ ಜೈಲಿನ ಎದುರು ಸುಮಾರು 25 ಸಾವಿರಕ್ಕೂ ಮಿಕ್ಕಿ ಜನ ಪ್ರತಿಭಟನೆಯನ್ನು ಹಮ್ಮಿಕೊಂಡದ್ದನ್ನು ಅರಿತ ಬ್ರಟೀಷರು ಅದನ್ನು 11 ಗಂಟೆ ಹಿಂದೂಡಿ ಮಾರ್ಚ್ 23. 1931, 7.30ಕ್ಕೆ ಗಲ್ಲಿಗೇರಿಸಿದರು.

          ಭಗತ್ ಸಿಂಗ್ ಅವರು  ಜೈಲಿನಲ್ಲಿದ್ದಾಗ ಜೈಲು ಅಧಿಕಾರಿ  ಬಂದು ನಿನ್ನನ್ನು ಈಗ ಗಲ್ಲಿಗೇರಿಸಬೇಕು ಬಾ ಎಂದು ಕರೆದಾಗ, ಭಗತ್ ಸಿಂಗ್ ರು ಇನ್ನೊಂದು ಪುಟ ಮಾತ್ರ ಓದುವುದಿದೇ ನಿಲ್ಲಿ ಎಂದು ಹೇಳಿದರು. ಇನ್ನೇನು ಕೇಲವೇ ಕ್ಷಣಗಳಲ್ಲಿ ನಾನು ಬದುಕಿರಲಾಲೇ ಎಂದು ತಿಳಿದಿದ್ದರೂ ಓದುವರ ಹೊಸ ವಿಚಾರ ತಿಳಿಯುವ ಕುತೂಹಲ ನೋಡಿದರೇ, ಎಂತಹವರಿಗೂ ಸೊಜಿಗವೇನಿಸುತ್ತದೆ.

   ಗಲ್ಲಿಗೇರುವುದಕ್ಕೂ ಮುನ್ನ ಭಗತ್ ತನ್ನ ತಾಯಿಗೆ "ಅಮ್ಮಾ ನಿನ್ನ ಮಗ ಇಡೀ ಬ್ರಿಟೀಷ್ ಸಾಮ್ರಾಜ್ಯಶಾಹಿಯ ಎದೆಗುಂಡಿಗೆ ಅದುರುವಂತೆ ಮಾಡಿ ಹೆಮ್ಮೆಯಿಂದ ಗಲ್ಲಿಗೇರುತ್ತಿದ್ದಾನೆ. ನಾನು ಗಲ್ಲಿಗೇರುವಾಗ ಖಂಡಿತಾ ನಗುನಗುತ್ತಿರುತ್ತೇನೆ. ನನ್ನ ಕಣ್ಣಲ್ಲಿ ಸಾವಿನ ಹೆದರಿಕೆಯನ್ನು ಆಂಗ್ಲರು ಖಂಡಿತ ನೋಡಲಾರರು. ನೀನು ಯಾವುದೇ ಕಾರಣಕ್ಕೂ ಕಣ್ಣಿರಿಡಬಾರದು. ನಿನ್ನ ಕಣ್ಣೀರು ನೋಡಿ ಭಗತ್ ಸಿಂಗ್ ತಾಯಿ ಅಸಹಾಯಕಳಾಗಿ ಕಣ್ಣೀರಿಡುತ್ತಿದ್ದಾಳೆ ಎಂದು ಬ್ರಿಟೀಷರು ಆಡಿಕೊಳ್ಳುವುದು ನನಗೆ ಇಷ್ಟವಿಲ್ಲ. ಏಕೆಂದರೆ ಜನರ ಕಣ್ಣಲ್ಲಿ ನಿನ್ನ ಮಗ ಹುತಾತ್ಮ ಎಂದು ಧೈರ್ಯ ತುಂಬಿದ್ದರು. ಆ ತಾಯಿ ಕಣ್ಣೀರಿನ ಜೊತೆ ಹೂಂ ಎಂದು ಮಾತುಕೊಟ್ಟಳು.

      ನಿಗದಿಪಡಿಸಿದ ವೇಳೆಗಿಂತ 1 ಗಂಟೆ ಮೊದಲೇ ಭಗತ್ ನನ್ನು ಗಲ್ಲಿಗೇರಿಸಲಾಯಿತು ಮತ್ತು ಸತ್ಲೆಜ್ ನದಿಯ ದಡದಲ್ಲಿ ಜೈಲು ಅಧಿಕಾರಿಗಳೇ ರಹಸ್ಯವಾಗಿ ಅಂತ್ಯಕ್ರಿಯೆ ನೇರವೇರಿಸಿದರು.

        ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಅನೌಪಚಾರಿಕವಾಗಿ 'ಹುತಾತ್ಮ'ರು ಎಂದು ಕರೆಯಲಾಗುತ್ತದೆಯೇ ಹೊರತು, ಭಾರತ ಸರಕಾರದಿಂದ ಅಧಿಕೃತವಾಗಿ ಅವರಿಗೆ 'ಹುತಾತ್ಮ' ಪಟ್ಟ ಸಿಕ್ಕಿಲ್ಲ.  ಈ ಮಹಾನ್ ಕ್ರಾಂತಿಕಾರಿಗಳಿಗೆ ಸರ್ಕಾರ ಹುತಾತ್ಮ ಪಟ್ಟ ನೀಡಲಿ ಎಂದು  ಪ್ರಾರ್ಥಿಸುತ್ತಾ ನನ್ನ ಮಾತಿಗೆ ಪೂರ್ಣವಿರಾಮ ನೀಡುತ್ತೇನೆ.

ಜೈ ಹಿಂದ್
ಜೈ ಕರ್ನಾಟಕ ಮಾತೆ


76ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ

 
    ಮಾನ್ಯ ಅಧ್ಯಕ್ಷರೇ ಮುಖ್ಯ ಅತಿಥಿಗಳೇ  ನನ್ನ ನೆಚ್ಚಿನ ಗುರುವೃಂದವೆ ಹಾಗೂ  ಗೌರವಾನ್ವಿತ ಊರಿನ ಪ್ರಮುಖರು, ಪೋಷಕರು ಮತ್ತು ಆತ್ಮೀಯ ಗೆಳೆಯ - ಗೆಳತಿಯರಿಗೆ 76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತೀಯರಾದ  ನಾವೆಲ್ಲ ಇಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಇಲ್ಲಿ ಸೇರಿದ್ದೇವೆ. ನಾನೀಗ ಸ್ವಾತಂತ್ರ್ಯ ದಿನದ ಕುರಿತು ನಾಲ್ಕಾರು ಮಾತನಾಡಲು ಇಷ್ಟಪಡುತ್ತೇನೆ.
 
            ನಮಗೆ ಸ್ವಾತಂತ್ರ್ಯ ದೊರೆತು  75 ವರ್ಷಗಳಾಗಿದ್ದರಿಂದ  ಈ ಸಲ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. 1947 ಆಗಸ್ಟ್ 15 ರಂದು ಬ್ರಿಟಿಷರ ಕಪಿಮುಷ್ಠಿಯಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ನೇಹಿತರೇ, ಇಂದು ನಾವು ಮೊದಲು ಈ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಲು ಎಲ್ಲವನ್ನೂ ಪಣಕ್ಕಿಟ್ಟ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಿಗೆ ನಮಸ್ಕರಿಸಬೇಕಾಗಿದೆ.
ಈ ದಿನವು ಮಹಾತ್ಮ ಗಾಂಧಿ, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್, ಸರ್ದಾರ್ ವಲ್ಲಭಭಾಯಿ ಪಟೇಲ್, ಲಾಲಾ ಲಜಪತ್ ರಾಯ್, ರಾಮಪ್ರಸಾದ್ ಬಿಸ್ಮಿಲ್ ಸೇರಿದಂತೆ ನೂರಾರು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತಪಸ್ಸು ಮತ್ತು ತ್ಯಾಗವನ್ನು ನೆನಪಿಸುತ್ತದೆ.

       ಪ್ರತಿ ವರ್ಷ ಆಗಸ್ಟ್ 15 ರಂದು, ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಂತರ ಭಾರತದ ಪ್ರಧಾನ ಮಂತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳು ಇತ್ಯಾದಿಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ. ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. ಎಲ್ಲೆಲ್ಲೂ ದೇಶಭಕ್ತಿ ಗೀತೆಗಳು ಮೊಳಗುತ್ತಿವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸ್ವಾತಂತ್ರ್ಯ ದಿನದಂದು, ರಾಜಧಾನಿ ಮತ್ತು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಬಣ್ಣಬಣ್ಣದ ದೀಪಗಳಿಂದ ಅಲಂಕರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿಗಳು 'ರಾಷ್ಟ್ರವನ್ನು ಉದ್ದೇಶಿಸಿ' ಭಾಷಣ ಮಾಡುತ್ತಾರೆ.

    ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದಿವೆ. ಭಾರತ ದೇಶವು ಎಲ್ಲ ಕ್ಷೇತ್ರಗಳಲ್ಲಿ ಪ್ರಪಂಚದಾದ್ಯಂತ ತನ್ನ ಛಾಪು ಮೂಡಿಸಿದೆ. ವಿಜ್ಞಾನ, ತಂತ್ರಜ್ಞಾನ, ಆರ್ಥಿಕ, ಕೃಷಿ, ಶಿಕ್ಷಣ, ಸಾಹಿತ್ಯ, ಕ್ರೀಡೆ ಸೇರಿದಂತೆ ಎಲ್ಲ ರಂಗಗಳಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸಿದೆ.
ಪರಮಾಣು ಸಾಮರ್ಥ್ಯದ ದೇಶವಾಗಿರುವ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಸಾಧನೆಗಳನ್ನು ಮಾಡಿದೆ. ಚಂದ್ರಯಾನ 2ರ ಯಶಸ್ಸು ಇದಕ್ಕೆ ದೊಡ್ಡ ಸಾಕ್ಷಿ. ಅಭಿವೃದ್ಧಿಯ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ಸಾಕಷ್ಟು ಮುನ್ನಡೆ ಸಾಧಿಸಿದೆ. ಜಗತ್ತು ಭಾರತದತ್ತ ನೋಡುತ್ತಿದೆ.

      ಇತ್ತೀಚೆಗೆ ಭಾರತ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಜಾವೆಲಿನ್ ಎಸೆತದಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಮತ್ತು ಕುಸ್ತಿಪಟು ರವಿಕುಮಾರ್ ದಹಿಯಾ ಬೆಳ್ಳಿ ಪದಕ ಪಡೆದರು. ಹಾಗೆಯೇ ಒಂದು ವಾರದ ಮುಂಚೆ ಮುಕ್ತಾಯವಾದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ 22 ಶುಲ್ಕದೊಂದಿಗೆ ಒಟ್ಟು 61 ಪದಕಗಳನ್ನು ಪಡೆದ ಭಾರತ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿರುವುದು ನಮ್ಮ ಹೆಮ್ಮೆ.

   ಸ್ನೇಹಿತರೇ, ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷಗಳಾದರೂ ಇಂದು ಭಾರತವು ಅಪರಾಧ, ಭ್ರಷ್ಟಾಚಾರ, ಹಿಂಸೆ, ನಕ್ಸಲಿಸಂ, ಭಯೋತ್ಪಾದನೆ, ಬಡತನ, ನಿರುದ್ಯೋಗ, ಅನಕ್ಷರತೆಯಂತಹ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ ಎಂಬುದಂತೂ ನಿಜ. ನಾವೆಲ್ಲರೂ ಒಗ್ಗಟ್ಟಾಗಿ ಈ ಸಮಸ್ಯೆಗಳನ್ನು ಕೊನೆಗೊಳಿಸಲು ಪ್ರಯತ್ನಿಸಬೇಕು. ಭಾರತವನ್ನು ಈ ಸಮಸ್ಯೆಗಳಿಂದ ಹೊರತರುವವರೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗುವುದಿಲ್ಲ. ಒಗ್ಗಟ್ಟಿನ ಪ್ರಯತ್ನದಿಂದ ಉತ್ತಮ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಕಾರಣವಾಗುತ್ತದೆ. ಉದಾಹರಣೆಗೆ ಕೋವಿಡ್-19 ವಿರುದ್ಧ ಸರ್ಕಾರಗಳ ಜೊತೆ ನಾವೆಲ್ಲ ಕೈ ಜೋಡಿಸಿದ ಕಾರಣ ಎರಡು ಅಲೆಗಳನ್ನು  ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು ಎಂದು ಹೇಳಬಹುದು.

              ನನಗೆ ಇಷ್ಟು ಮಾತನಾಡಲು ಅವಕಾಶ ಕೊಟ್ಟ ತಮ್ಮೆಲ್ಲರಿಗೂ ನಾನು ಧನ್ಯವಾದ ತಿಳಿಸುತ್ತಾ ನನ್ನ ಮಾತಿಗೆ ಪೂರ್ಣವಿರಾಮ ನೀಡುತ್ತೇನೆ.
 ಜೈ ಹಿಂದ್
 ಜೈ  ಕರ್ನಾಟಕ ಮಾತೆ 

NMMS ಪರಿಕ್ಷೆ 2022-23ರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ.

 2022-23ನೇ ಸಾಲಿನ NMMS ಪರೀಕ್ಷೆಯು  ಅಕ್ಟೋಬರ್-ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು(KSQAAC) ದಿನಾಂಕ 04/08/2022 ರಂದು ಸುತ್ತೋಲೆ ಹೊರಡಿಸಿದೆ. 
       ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ  ವಿದ್ಯಾರ್ಥಿಗಳು ಹೊಂದಿರಬೇಕಾದ  ಅರ್ಹತೆಗಳು & ಶಾಲಾ ಮುಖ್ಯ ಶಿಕ್ಷಕರು ಪೂರ್ವಭಾವಿಯಾಗಿ ಸಿದ್ದಪಡಿಸಿಕೊಳ್ಳಬೇಕಾದ/ವಿದ್ಯಾರ್ಥಿಗಳಿಂದ ಸಂಗ್ರಹಿಸಬೇಕಾದ ಮಾಹಿತಿ/ದಾಖಲೆಗಳ ಕುರಿತು ಸುತ್ತೋಲೆ ಮಾಹಿತಿ ಒಳಗೊಂಡಿದ್ದು ಈ ಕೆಳಕಂಡಂತಿದೆ.






ದೇಶಭಕ್ತಿ ಗೀತೆಗಳು | Desha Bhakti Geetegalu

ನನ್ನ ದೇಶ ನನ್ನ ಜನ - 'ಚೆನ್ನವೀರ ಕಣವಿ'

'ನನ್ನ ದೇಶ ನನ್ನ ಜನ'
ನನ್ನ ದೇಶ ನನ್ನ ಜನ
ನನ್ನ ಮಾನ ಪ್ರಾಣ ಘನ
ತೀರಿಸುವೆನೆ ಅದರ ಋಣ
ಈ ಒಂದೇ ಜನ್ಮದಿ?

ಕೆಂಪು ನೆಲದ ಹಸಿರು ಬೆಳೆ
ಕಪ್ಪು ಬಣ್ಣ ಮೊಗದ ಕಳೆ
ಸೂರ್ಯ ಚಂದ್ರ ಚುಕ್ಕಿಗಳೆ
ನಮ್ಮ ಹಿರಿಯ ಒಕ್ಕಲು

ನೂರು ಭಾವ ಭಾಷೆ ನೆಲೆ
ನೂರು ಬಣ್ಣ ವೇಷ ಕಲೆ
ಸ್ವಚ್ಛಂದದ ಹಕ್ಕಿಗಳೆ
ನಮ್ಮ ಹಾಡು ಬದುಕಲು

ಪ್ರಾಚೀನವ ತಿಕ್ಕಿ ತೊಳೆ
ವರ್ತಮಾನ ಜೀವಕಳೆ
ಉಕ್ಕೇರಲಿ ಬಾಳ ಹೊಳೆ
ಆ ಭವಿಷ್ಯದೊಡಲಿಗೆ

ಮೈ ಕೊಡವಿದೆ ಮೂಕ ಜನ
ಕೈ ಹಿಡಿಯಿರಿ ನಾಕು ಚಣ
ಎದ್ದೇಳಲಿ ಎಲ್ಲ ಗುಣ
ಆ ಸಮೃದ್ಧ ಬಾಳಿಗೆ
    ----------೦----------

ರಚನೆ : ಚೆನ್ನವೀರ ಕಣವಿ

ಓ ನನ್ನ ದೇಶ ಬಾಂಧವರೇ....

ಓ ನನ್ನ ದೇಶ ಬಾಂಧವರೇ
ಕಣ್ಣೀರ ಕಥೆಯಿದು ಕೇಳಿ
ಈ ದೇಶಕಾಗಿ ಮಡಿದಾ
ವೀರ ಯೋಧರಾ ಕಥೆ ಕೇಳಿ||೨ಸಲ||

ಹಿಮಾಲಯವೂ ಭುಗಿಲೇಳಲು
ಸ್ವಾತಂತ್ರ್ಯಕ್ಕೆ ಭಯವಾ ತರಲು
ಕೊನೆವರೆಗೂ ಹೋರಾಡುತಲಿ
ಕೊನೆವರೆಗೂ ಹೋರಾಡುತಲಿ
ಹೆಣವಾಗಿ ಉರುಳಿದರಲ್ಲಿ
ಭೂ ತಾಯಿಯ ಋಣ ತೀರಿಸುತ
ಕಣ್ಮುಚ್ಚಿ ಅಮರರೂ ಆಗಿ
ಈ ದೇಶಕಾಗಿ ಮಡಿದಾ
ವೀರ ಯೋಧರಾ ಕಥೆ ಕೇಳಿ

ದೇಶ ಆಚರಿಸಲು ದೀಪಾವಳಿ
ಗಡಿಯಾಚೆ ರಕ್ತದ ಓಕುಳಿ
ಮನೆಯಲ್ಲ ಸಂತಸವಿರಲು
ಮನೆಯೆಲ್ಲ ನಲಿಯುತಲಿರಲು
ಅಲ್ಲವರಿಗೆ ಮರಣದ ತೊಟ್ಟಿಲು
ವೀರ ಮರಣ ವಪ್ಪಿದ ಸೈನ್ಯಕೆ
ಅಶ್ರು ತರ್ಪಣ ನೀಡಿ ಜನರೇ
ಈ ದೇಶಕಾಗಿ ಮಡಿದಾ
ವೀರ ಯೋಧರಾ ಕಥೆ ಕೇಳಿ


ಕುಲ ಜಾತಿಗಳೆಲ್ಲವೂ ಮರೆತು
ಭಾಷೆ ಪ್ರಾಂತ್ಯದ ಭೇದವ ತೊರೆದು
ಕುಲ ಜಾತಿಗಳೆಲ್ಲವೂ ಮರೆತು
ಭಾಷೆ ಪ್ರಾಂತ್ಯದ ಭೇದವ ತೊರೆದು
ಗಡಿ ನೆಲದೀ ಮಡಿದವರೆಲ್ಲಾ..
ಗಡಿ ನೆಲದೀ ಮಡಿದವರೆಲ್ಲಾ..
ವೀರ ಧೀರ ಭಾರತ ವಾಸಿ

ಮಳೆ ಗರಿಯುತ ರಕ್ತವು ಸಿಡಿದು,

ಸಾರಿ ಹೇಳಿತು ಭಾರತೀಯರೆಂದು
ಈ ದೇಶಕಾಗಿ ಮಡಿದಾ
ವೀರ ಯೋಧರಾ ಕಥೆ ಕೇಳಿ


ಗಾಯ ರಕ್ತವು ಆವರಿಸಿದರು
ವೈರಿ ಮುಗಿಸಲು ಮುಂದೂಡಿದರು
ಎದುರಾದ ವೈರಿಯ ಮುಗಿಸಿ
ತಾಯಿ ಮಡಿಲಲಿ ಬಸವಳಿದಿರಲು
ಕೊನೆ ಉಸಿರು ತಡೆಯಿಡಿದಿರಲೂ...

ಕೊನೆ ಉಸಿರು ತಡೆಯಿಡಿದಿರಲು,
ಕೂಗಿ ಹೇಳಿದರು ಮಾತೊಂದ
ಕೊನೆ ಉಸಿರು ತಡೆಯಿಡಿದಿರಲು,
ಕೂಗಿ ಹೇಳಿದರು ಮಾತೊಂದ,

ಸುಖವಾಗಿರಿ ದೇಶದ ಜನರೇ..
ಸುಖವಾಗಿರಿ ನಾಡಿನ ಜನರೇ..
ಎಂದು ಹೇಳುತ ಕಣ್ಮುಚ್ಚಿದರು..
ಎಂದು ಹೇಳುತ ಕಣ್ಮುಚ್ಚಿದರು..

ಮರೆಯಾದರು ಮನದಲಿ ಉಳಿದು

ಬಲಿದಾನ ತ್ಯಾಗವ ಮೆರೆದು

ಈ ದೇಶಕಾಗಿ ಮಾಡಿದಾ
ವೀರ ಯೋಧರಾ ಕಥೆ ಕೇಳಿ
ಓ ನನ್ನ ದೇಶ ಬಾಂಧವರೇ
ಕಣ್ಣೀರ ಕಥೆಯಿದು ಕೇಳಿ
ಈ ದೇಶಕಾಗಿ ಮಡಿದಾ
ವೀರ ಯೋಧರಾ ಕಥೆ ಕೇಳಿ

ಜಯ ಭಾರತ, ಜಯ ಭಾರತ ಸೇನಾ

ಜಯ ಭಾರತ, ಜಯ ಭಾರತ ಸೇನಾ
ಜಯ ಭಾರತ, ಜಯ ಭಾರತ, ಜಯ ಭಾರತ.
                ----------೦----------

ಜಗ್ಗದು ಜಗ್ಗದು ಇಂಡಿಯಾ - 'ಬರಗೂರು ರಾಮಚಂದ್ರಪ್ಪ'

ಇಂಡಿಯಾ, ಇಂಡಿಯಾ, ನಮ್ಮ ಇಂಡಿಯಾ(೨)

ಬೆವರಿನ ಬೆಳಕಿನ ಬೆಟ್ಟ ಇಂಡಿಯಾ

ದುಡಿಮೆಯ ಹಿರಿಮೆಯ ದಿಟ್ಟ ಇಂಡಿಯಾ


ಜಗ್ಗದು ಜಗ್ಗದು ಯಾರಿಗೂ ಜಗ್ಗದು ಇಂಡಿಯಾ

ಅಗ್ಗದ ಅರಸರಿಗೆಂದಿಗೂ ಕುಗ್ಗದು ಇಂಡಿಯಾ

ನಮ್ಮಿಂಡಿಯಾ, ಬೆವರಿನ ಇಂಡಿಯಾ{೨}


ಜಗ್ಗದು ಜಗ್ಗದು ಯಾರಿಗು ಜಗ್ಗದು ಇಂಡಿಯಾ


ಬಂಡೆ ಬಂಡೆಯ ಮೇಲೆ, ಗಂಡು ಅರಳಿದ ಲೀಲೆ

ಗುಂಡು ಹೊಡೆಯೋ ದಂಡು, ಒಣಗಿ ನಿಂತ ಬೆಂಡು

ಬಿಡುಗಡೆಯ ಬೆಳಕನು ಚಲ್ಲೋ,

ಓಓ ಓಹೋ ಓ ಓ ಓ, ಆ ಆ ಓಹೋ ಓ ಓ ಓ 

ಬಿಡುಗಡೆಯ ಬೆಳಕನು ಚಲ್ಲೋ ಬಂಡಾಯದ ಗುಂಡಿಗೆ||


ಜಗ್ಗದು ಜಗ್ಗದು(೨)

ಜಗ್ಗದು ಜಗ್ಗದು ಯಾರಿಗೂ ಜಗ್ಗದು ಇಂಡಿಯಾ

ಅಗ್ಗದ ಅರಸರಿಗೆಂದಿಗೂ ಕುಗ್ಗದು ಇಂಡಿಯಾ

ನಮ್ಮಿಂಡಿಯಾ, ಬೆವರಿನ ಇಂಡಿಯಾ||


ಜಗ್ಗದು ಜಗ್ಗದು ಯಾರಿಗು ಜಗ್ಗದು ಇಂಡಿಯಾ


ಇಂಡಿಯಾ, ಇಂಡಿಯಾ, ನಮ್ಮ ಇಂಡಿಯಾ(೨)


ಕೋಟೆ ಕೊತ್ತಲ ಕಾದ ಕೋಟಿ ದೀಪದ ಹಣತೆ

ನಾಡಿಗೆ ದಿನವೂ ದುಡಿದ, ಕೂಲಿ ಕುಂಬಣಿ ಜನತೆ 

ಸ್ವಾತಂತ್ರ್ಯದ ಹಕ್ಕನ್ನು ಕೇಳಿ

ಓಓ ಓಹೋ ಓ ಓ ಓ, ಆ ಆ ಓಹೋ ಓ ಓ ಓ 

ಸ್ವಾತಂತ್ರ್ಯದ ಹಕ್ಕನ್ನು ಕೇಳಿ, ಎದ್ದು ನಿಂತ ಚಿರತೆ||


ಜಗ್ಗದು ಜಗ್ಗದು(೨)

ಜಗ್ಗದು ಜಗ್ಗದು ಯಾರಿಗೂ ಜಗ್ಗದು ಇಂಡಿಯಾ

ಅಗ್ಗದ ಅರಸರಿಗೆಂದಿಗೂ ಕುಗ್ಗದು ಇಂಡಿಯಾ

ನಮ್ಮಿಂಡಿಯಾ, ಬೆವರಿನ ಇಂಡಿಯಾ||


ಜಗ್ಗದು ಜಗ್ಗದು ಯಾರಿಗು ಜಗ್ಗದು ಇಂಡಿಯಾ


ಇಂಡಿಯಾ, ಇಂಡಿಯಾ, ನಮ್ಮ ಇಂಡಿಯಾ(೨)

ಬೆವರಿನ ಬೆಳಕಿನ ಬೆಟ್ಟ ಇಂಡಿಯಾ

ದುಡಿಮೆಯ ಹಿರಿಮೆಯ ದಿಟ್ಟ ಇಂಡಿಯಾ||


ಹಾಳೆ ಹಾಳೆಯ ಮೇಲೆ, ಮಿಂಚು ಮಾತಿನ ನಾಳೆ

ಜನಪದರ ಕೊರಳಲ್ಲಿ, ಬಿಡುಗಡೆಯ ರಣ ಕಹಳೆ...

ಮೂರು ಬಣ್ಣದ ಬಾವುಟ ಹಿಡಿದ..

ಆ ಆ ಆ ಆ ಆಆಆ , ಓ ಓ ಓಹೋ ಓ ಓ ಓ

ಮೂರು ಬಣ್ಣದ ಬಾವುಟ ಹಿಡಿದ, ಸಿಡಿಲ ಮೊಗ್ಗಿನ ಮಾಲೆ||


ಜಗ್ಗದು ಜಗ್ಗದು(೨)

ಜಗ್ಗದು ಜಗ್ಗದು ಯಾರಿಗೂ ಜಗ್ಗದು ಇಂಡಿಯಾ

ಅಗ್ಗದ ಅರಸರಿಗೆಂದಿಗೂ ಕುಗ್ಗದು ಇಂಡಿಯಾ

ನಮ್ಮಿಂಡಿಯಾ, ಬೆವರಿನ ಇಂಡಿಯಾ||


ಜಗ್ಗದು ಜಗ್ಗದು ಯಾರಿಗೂ ಜಗ್ಗದು ಇಂಡಿಯಾ

ಅಗ್ಗದ ಅರಸರಿಗೆಂದಿಗೂ ಕುಗ್ಗದು ಇಂಡಿಯಾ

ನಮ್ಮಿಂಡಿಯಾ, ಬೆವರಿನ ಇಂಡಿಯಾ

ಜಗ್ಗದು ಜಗ್ಗದು ಯಾರಿಗು ಜಗ್ಗದು ಇಂಡಿಯಾ||

----------೦----------


ರಚನೆ:‌ ಬರಗೂರು ರಾಮಚಂದ್ರಪ್ಪ

ಸಂಗೀತ: ಹಂಸಲೇಖ

ಚಲನಚಿತ್ರ: ಹಗಲು ವೇಷ


ಭಾರತಾಂಬೆ ನಿನ್ನ ಜನ್ಮದಿನ - 'ಎಸ್. ನಾರಾಯಣ್'

ಭಾರತಾಂಬೆ ನಿನ್ನ ಜನ್ಮದಿನ

ಭಾರತೀಯರ ಶೌರ್ಯ ಮೆರೆದ ದಿನ|


ಗಂಡೆದೆ ವೀರರಲ್ಲಿ, ಗುಂಡಿಗೆ ಪ್ರಾಣ ಚೆಲ್ಲಿ

ನಿನ್ನನು ಬಿಡಿಸಿದ ಇದೇ ದಿನ

ಜನ್ಮವ ಕೊಡಿಸಿದ ಮಹಾದಿನ||


ಭಾರತಾಂಬೆ ನಿನ್ನ ಜನ್ಮದಿನ

ಭಾರತೀಯರ ಶೌರ್ಯ ಮೆರೆದ ದಿನ


ಹೇ, ಹತ್ತಾರು ಭಾವೆಗಳ ಹೆತ್ತೋಳಮ್ಮ

ನಿನ್ನ ಮಡಿಲಲ್ಲಿ ಗಂಗೆ ತುಂಗೆ ನಗುತಾರಮ್ಮ


ಅನ್ಯರು ಬಂದರೂನು ಮುತ್ತಾಡುವ ತಾಯಿ

ನಮ್ಮೂರ ಅಪ್ಪಿಕೊಂಡು ನಲಿದಾಡುವೆ


ಭೂಗೋಳದಲ್ಲಿ ಒಂದು ಜ್ಯೋತಿ ಇದೆ

ಅದಕೆ ಭಾರತ ಮಾತೆ ಎಂಬ ಹೆಸರು ಇದೆ

ಲೋಕವೆ ಮೆಚ್ಚುವಂತ ಗೀತೆಯು ಇಲ್ಲಿ ಇದೆ

ವಂದೇ ಮಾತರಂ ಎಂಬ ನಾಮದ ಗಂಧವಿದೆ

ನುಡಿಯಲವನೆ ಧನ್ಯ||


ಭಾರತಾಂಬೆ ನಿನ್ನ ಜನ್ಮದಿನ

ಭಾರತೀಯರ ಶೌರ್ಯ ಮೆರೆದ ದಿನ|


ಭಾರತ, ನಮ್ಮ ಭಾರತ(೨)


ಉಸಿರಿರುವ ತನಕ, ನೀ ಭಾರತೀಯನೆಂದು ಬೀಗು

ಕೊನೆಯುಸಿರೆಳೆವಾಗಲೂ, ವಂದೇ ಮಾತರಂ ಎಂದು ಕೂಗು


ವಂದೇ ಮಾತರಂ(೪)


ಭಾರತಾಂಬೆ ನಿನ್ನ ಜನ್ಮದಿನ

ಭಾರತೀಯರ ಶೌರ್ಯ ಮೆರೆದ ದಿನ|


ಗಂಡೆದೆ ವೀರರಲ್ಲಿ, ಗುಂಡಿಗೆ ಪ್ರಾಣ ಚೆಲ್ಲಿ

ನಿನ್ನನು ಬಿಡಿಸಿದ ಇದೇ ದಿನ

ಹೋ, ಜನ್ಮವ ಕೊಡಿಸಿದ ಮಹಾದಿನ||


ಭಾರತಾಂಬೆ ನಿನ್ನ ಜನ್ಮದಿನ

ಭಾರತೀಯರ ಶೌರ್ಯ ಮೆರೆದ ದಿನ|

----------೦----------


ರಚನೆ:‌ ಎಸ್. ನಾರಾಯಣ್
'ವೀರಪ್ಪ ನಾಯ್ಕ' ಚಲನಚಿತ್ರದಿಂದ ಆಯ್ದ ದೇಶಭಕ್ತಿ ಗೀತೆ.

ಹಿಂದುಸ್ಥಾನವು ಎಂದೂ ಮರೆಯದ

ಹಿಂದುಸ್ಥಾನವು ಎಂದೂ ಮರೆಯದ ಭಾರತ ರತ್ನವು ನೀನಾಗು ||
ಕನ್ನಡ ಹಿರಿಮೆಯ ಮಗನಾಗು, ಕನ್ನಡ ನುಡಿಯಾ ಸಿರಿಯಾಗು
ಹಿಂದುಸ್ಥಾನವು ಎಂದೂ ಮರೆಯದ ಭಾರತ ರತ್ನವು ನೀನಾಗು

ಭಾರತ ದೇಶದ ಬಡವರ ಕಂಬನಿ ಒರೆಸುವ ನಾಯಕ ನೀನಾಗು ||
ಭಾರತೀಯರ ವಿಶ್ವ ಪ್ರೇಮವ ಮೆರೆಸುವ ಜ್ಞಾನಿ ನೀನಾಗು
ಭಾರತೀಯರ ಭವ್ಯ ಭವಿಷ್ಯವ ಬೆಳಗುವ ವಿಜ್ಞಾನಿ ನೀನಾಗು, ಬೆಳಗುವ ವಿಜ್ಞಾನಿ ನೀನಾಗು

ಹಿಂದುಸ್ಥಾನವು ಎಂದೂ ಮರೆಯದ ಭಾರತ ರತ್ನವು ನೀನಾಗು |

ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯು ನೀನಾಗು ||
ಮಾರಕಶಕ್ತಿಯ ದೂರಗೈಯುವ ವೀರಶಿರೋಮಣಿ ನೀನಾಗು
ಬ್ರಮ್ಹಾಂಡವನೇ ಬೆಳಗುವ ಶಕ್ತಿಯ ಕಾಣುವ ಯೋಗಿಯು ನೀನಾಗು, ಕಾಣುವ ಯೋಗಿಯು ನೀನಾಗು

ಹಿಂದುಸ್ಥಾನವು ಎಂದೂ ಮರೆಯದ ಭಾರತ ರತ್ನವು ನೀನಾಗು ||
                 ----------0----------
'ಅಮೃತ ಘಳಿಗೆ' ಚಲನಚಿತ್ರದಲ್ಲಿನ ದೇಶಭಕ್ತಿ ಗೀತೆ.

ದೇಶ ನನ್ನದು - 'ದೇಶಭಕ್ತಿ ಗೀತೆ'

 'ದೇಶ ನನ್ನದು'
ದೇಶ ದೇಶ ದೇಶ ದೇಶ ದೇಶ ನನ್ನದು
ಸಿಂಧು ಕಣಿವೆ ಕೈಲಾಸ ಗಿರಿಯು ನನ್ನದು||

ಹರಿಹರಿಯುವ ನೀರಕಣ ಮೇಲ್ನಗುವ ಬಾನಂಗಣ
ಹಸಿರಾಗಿಹ ಮಣ್ಣಕಣ ಹಾರಾಡುವ ಹಕ್ಕಿಗಣ
ಹೊಳೆಹೊಳೆಯುವ ಚುಕ್ಕಿಗಣ ಎಲ್ಲ ನನ್ನದು
ಎಲ್ಲ ನನ್ನದು, ಎಲ್ಲ ನನ್ನದು||

ನಗೆ ಚೆಲ್ಲುವ ಮಲ್ಲಿಗೆಯ ಹೂದಳವು ನನ್ನದು
ಬಗೆಬಗೆಯ ತೆಂಗುಬಾಳೆ ಕಡಲಾಗಿಹ ಕಾಡಹೊಳೆ
ಬೆಳೆದು ನಿಂತ ವನಸಿರಿಯು, ಕಂಗೊಳಿಪ ಬೃಂದಾವನ
ಎಲ್ಲ ನನ್ನದು, ಎಲ್ಲ ನನ್ನದು||

ನರಹರಿಯ ಪಾಂಚಜನ್ಯ, ವಾಲ್ಮೀಕಿಯ ರಾಮಾಯಣ
ವೇದಗಳ ಉದ್ಘೋಷ ಮಂತ್ರತಂತ್ರ ಆವಾಸ
ಕಿವಿಯ ಮೊರೆವ ಮೇಘದೂತ ಕರುಳ ಕೊರೆವ ಕುರುಕ್ಷೇತ್ರ
ಎಲ್ಲ ನನ್ನದು, ಎಲ್ಲ ನನ್ನದು||

ವ್ಯಾಸ ಭಾಸ ಕಾಳಿದಾಸ ಬುದ್ಧ ಬಸವ ಕನಕದಾಸ
ರಾಮಕೃಷ್ಣ ಪರಮಹಂಸ ಮಧುಕೇಶವ ನೀಲಹಂಸ
ತಾಯಿ ಮಡಿಲ ಮುಗುಳುನಗೆ ಕೋಟಿ ತುಟಿಯ ಮಂದಹಾಸ
ಎಲ್ಲ ನನ್ನದು, ಎಲ್ಲ ನನ್ನದು||
                          ----------೦----------

ಗಾನಮಾಲದ ದೇಶಭಕ್ತಿ ಗೀತೆಗಳ ಸಂಗ್ರಹದಿಂದ ಆಯ್ದ ಗೀತೆ.

Popular Post