ಈ ಮಣ್ಣು ನಮ್ಮದು
ಈ ಮಣ್ಣು ನಮ್ಮದು ಈ ಗಾಳಿ ನಮ್ಮದು
ಕಲಕಲನೆ ಹರಿಯುತಿಹ ನೀರು ನಮ್ಮದು
ಕಣಕಣದಲು ಭಾರತೀಯ ರಕ್ತ ನಮ್ಮದು
ನಮ್ಮ ಕಾಯ್ವ ಹಿಮಾಲಯವು ತಂದೆ ಸಮಾನ
ಗಂಗೆ ತುಂಗೆ ಕಾವೇರಿಯು ತಾಯಿ ಸಮಾನ
ಈ ದೇಶದ ಜನರೆಲ್ಲರೂ ಸೋದರ ಸಮಾನ,
ಈ ನಾಡಿನ ಹೃದಯವದು ದೈವ ಸನ್ನಿಧಾನ.
ಅಜಂತ ಎಲ್ಲೋರ ಹಳೆಬೀಡು ಬೇಲೂರು
ಶಿಲೆಗಳಿವು ಕಲೆಯ ಆಗರ
ಹಿಂದು, ಬುದ್ಧ, ಜೈನ, ಕ್ರೈಸ್ತ, ಮುಸಲ್ಮಾನ
ಧರ್ಮಗಳ ಮಹಾಸಾಗರ
ನಡೆದು ಹೋದ ಚರಿತೆಯು ನಾಳೆ ಎನುವ ಕವಿತೆಯು
ಈ ನಾಡ ಮಣ್ಣಲಿದೆ ಜೀವನ ಸಾರ/ ಜೀವನ ಸಾರ
ಹ್ಞೂ..ಹ್ಞೂ...ಹ್ಞೂ...ಹ್ಞೂ...
ತಂಗಾಳಿಗೆ ತಲೆದೂಗುವ ಪೈರಿನ ಹಾಡು
ಆ ಹಾಡಿಗೆ ತಾಳ ಕೊಡುವ ಯಂತ್ರದ ಜಾಡು
ವಿಜ್ಞಾನವು ಅಜ್ಞಾನವ ಗೆಲ್ಲುವ ಹಾಡು
ಹೊಸ ಭಾರತ ನಿರ್ಮಾಣವು ಸಾಗಿದೆ ನೋಡು.
----------೦----------
ರಚನೆ : ಆರ್. ಎನ್ ಜಯಗೋಪಾಲ್
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.