Menu

Home ನಲಿಕಲಿ About ☰ Menu


 

🔍

ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಗಳ ಸಂಪೂರ್ಣ ಮಾಹಿತಿ...

              ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗ(ಪ್ರವರ್ಗ – 1, 2ಎ, 3ಎ, 3ಬಿ) ಳಿಗೆ ನೀಡುವ  (ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಶುಲ್ಕ ವಿನಾಯಿತಿ) ಎಲ್ಲಾ ವಿದ್ಯಾರ್ಥಿ ವೇತನಗಳ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ

ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 620 ಬಿಎಂಎಸ್ 2014, ದಿನಾಂಕ 7.1.2015ರಂತೆ)
ತರಗತಿಬಾಲಕ/ಬಾಲಕಿAdhoc Grantಒಟ್ಟು
1 ರಿಂದ 5250/-500/-750/-
6 ರಿಂದ 8400/-500/-900/-
9 ರಿಂದ 10500/-500/-1000/-
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
2.ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು.
3.ಸರ್ಕಾರದ / ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ /ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಹರು.
4.ಸರ್ಕಾರದ / ಸರ್ಕಾರದ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ/ವಸತಿಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
5.ಹಿಂದಿನ ತರಗತಿಯಲ್ಲಿ ಶೇ.75 ಕ್ಕಿಂತ ಹೆಚ್ಚು ಹಾಜರಾತಿ ಹೊಂದಿದವರು ಮಾತ್ರ ಅರ್ಹರು.
6.ಹಿಂದಿನ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
ಆಯ್ಕೆ ವಿಧಾನ :
1.ಮೊದಲನೇ ಆದ್ಯತೆ: ಎಲ್ಲಾ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು.
2.ಎರಡನೇ ಆದ್ಯತೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವುದು.
3.ಮೂರನೇ ಆದ್ಯತೆ: ಉಳಿದ ಮೊತ್ತವನ್ನು ಅರ್ಹವಿರುವ ಪ್ರವರ್ಗ-2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳ(ಕೇಂದ್ರ ಸರ್ಕಾರದ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಇರುವ ಜಾತಿಗಳು ಮಾತ್ರ) ವಿದ್ಯಾರ್ಥಿಗಳಿಗೆ ಆದಾಯ ಮತ್ತು ಅರ್ಹತೆಯ ಆಧಾರದ ಮೇಲೆ ಈ ಕೆಳಕಂಡ ಪ್ರಮಾಣದಂತೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು.
1ಪ್ರವರ್ಗ - 2ಎಶೇಕಡ 61
2ಪ್ರವರ್ಗ 3ಎಶೇಕಡ 17
3ಪ್ರವರ್ಗ 3ಬಿಶೇಕಡ 21
4ಇತರೆ ಹಿಂದುಳಿದ ವರ್ಗಶೇಕಡ 01
ಒಟ್ಟುಶೇಕಡ 100
ಮಂಜೂರಾತಿ ವಿಧಾನ :
1.ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು.
2.ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಆನ್ ಲೈನ್ ಮೂಲಕ ಪರಿಶೀಲಿಸಿ, ಅರ್ಹ ಅರ್ಜಿಗಳನ್ನು ದೃಢೀಕರಿಸುವುದು.
3.ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ SSP ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
4.ಭರ್ತಿ ಮಾಡಿರುವ ಮಾಹಿತಿಯನ್ನು ಪರಿಶೀಲಿಸಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೃಢೀಕರಿಸುವುದು.
5.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ ಆಧಾರ್ ಪಾವತಿ ವ್ಯವಸ್ಥೆ (Aadhar Bridge Payment System) ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದು.



ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ

ಮೆಟ್ರಿಕ್-ನಂತರದ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 518 ಬಿಎಂಎಸ್ 2013, ದಿನಾಂಕ 3.9.2013ರಂತೆ)
ಕ್ರ. ಸಂ.ಗುಂಪುಮಂಜೂರು ಮಾಡಲಾಗುವ ವಿದ್ಯಾರ್ಥಿವೇತನದ
ದರ (ವಾರ್ಷಿಕ)
1ಗುಂಪು-ಎ3500/-
2ಗುಂಪು-ಬಿ3350/-
3ಗುಂಪು-ಸಿ2100/-
4ಗುಂಪು-ಡಿ1600/-
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ
ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ
ಪಡೆಯಲು ಅರ್ಹರಿರುತ್ತಾರೆ.
3. ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು
ಪಡೆಯಲು ಅರ್ಹರಿರುವುದಿಲ್ಲ.
4.ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ನಿಗದಿಪಡಿಸಿದೆ.
5.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-140%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
6. ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವಿದ್ಯಾರ್ಥಿವೇತನಕ್ಕೆ ಅರ್ಹರಿರುವುದಿಲ್ಲ.
7. ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಕೋರ್ಸಿನ ಗುಂಪುವಾರು ಪ್ರತಿ ತಿಂಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು10 ತಿಂಗಳ ಅವಧಿಗೆ ಅರ್ಹತೆ ಮತ್ತು ಆದಾಯಮಿತಿಯನ್ನು ಪರಿಗಣಿಸಿ, ಮಂಜೂರು ಮಾಡಲಾಗುವುದು.
ಮಂಜೂರಾತಿ ವಿಧಾನ :
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ
ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸಿ ಸದರಿ
ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಆಯಾ ವರ್ಷದಲ್ಲಿ ಲಭ್ಯವಾಗುವ ಜಿಲ್ಲಾವಾರು ಅನುದಾನಕ್ಕೆ ತಕ್ಕಂತೆ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ
ವಿದ್ಯಾರ್ಥಿವೇತನವನ್ನು ಮಂಜೂರುಮಾಡುವುದು.
7.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ
ಖಜಾನೆ-2 ತಂತ್ರಾಂಶದ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾಮಾಡುವುದು.


ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ

ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು :
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ
ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ
ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು
ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ
ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.
4.ವಿದ್ಯಾರ್ಥಿಗಳು
(i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,
(ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು
(iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ
ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
(i) ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ
(ii) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
ಆ) ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು.
ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ,
ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.

ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-140%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ
ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.)
7. ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ,
ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ,
ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ
ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು
ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು.
ಅನುದಾನ ಹಂಚಿಕೆ ವಿಧಾನ :
(ಅ) ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು.
ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು
1ಪ್ರವರ್ಗ - 115%
2ಪ್ರವರ್ಗ 2ಎ53%
3ಪ್ರವರ್ಗ - 3ಎ14%
4ಪ್ರವರ್ಗ - 3ಬಿ18%
ಒಟ್ಟು100%
(ಆ) ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means)
ಅನುಗುಣವಾಗಿ ಮಂಜೂರು ಮಾಡಬೇಕು.
ಮಂಜೂರಾತಿ ವಿಧಾನ :
1.ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ
ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ
ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಠ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ
ಪಡೆದು, ಆನ್‍ಲೈನ್‍ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್‍ಲೋಡ್ ಮಾಡುವುದು.
7.ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ
ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು.
8.ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು.



ಶುಲ್ಕ ವಿನಾಯಿತಿ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನೆರವಾಗುವ ದೃಷ್ಟಿಯಿಂದ ಸರ್ಕಾರವು, ಸರ್ಕಾರದ ಕಾಲೇಜುಗಳಿಗೆ ನಿಗದಿಪಡಿಸುವ
ಶುಲ್ಕದ ದರಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಯ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ಜಮಾಗೊಳಿಸಲಾಗುವುದು.
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.
ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ / ಮಾನ್ಯತೆ ಪಡೆದ ಅನುದಾನರಹಿತ
ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
3.ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ವರಮಾನ ಈ ಕೆಳಗೆ ನಿಗದಿಪಡಿಸಿದ ಗರಿಷ್ಠ ಮಿತಿಯೊಳಗೆ ಇರಬೇಕು.
1.ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ
2.ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ ಮತ್ತು ಎಲ್ಲಾ ಧರ್ಮಗಳ,
ಜಾತಿಗಳ ಹಾಗೂ ಸಮುದಾಯಗಳ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
3.ಸಮಾಜ ಕಲ್ಯಾಣ/ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ.
4.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ
ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-1 ಮತ್ತು ಅಂಧ ವಿದ್ಯಾರ್ಥಿಗಳು40%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
5.ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ.
ಆ) ಸ್ನಾತಕೋತ್ತರ, ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ
ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ /
ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮಾ, ಪದವಿ ಕೋರ್ಸುಗಳಲ್ಲಿ
ವ್ಯಾಸಂಗ ಮಾಡಿದ್ದಲ್ಲಿ ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ.
ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು
ಮಕ್ಕಳಿಗೆ ಅನ್ವಯಿಸುವುದಿಲ್ಲ.
6.ಅ) ಶುಲ್ಕ ವಿನಾಯಿತಿಗೆ ಅರ್ಹ ಇರುವ ಶುಲ್ಕಗಳು:ರಾಜ್ಯಮಟ್ಟದ ಸಮಿತಿಯು ನಿಗದಿಪಡಿಸುವ ದರಗಳಂತೆ ಈ ಕೆಳಗಿನ ಐದು ಶುಲ್ಕಗಳಿಗೆ
ಮಾತ್ರ ವಿನಾಯಿತಿ ನೀಡಲಾಗುವುದು.
ಅ) ಬೋಧನಾ ಶುಲ್ಕ
ಆ) ಪ್ರಯೋಗಾಲಯ ಶುಲ್ಕ (ಯಾವ ಕೋರ್ಸುಗಳಲ್ಲಿ ಪ್ರಯೋಗಾಲಯ ಕಡ್ಡಾಯವಿದೆಯೋ ಆ ಕೋರ್ಸುಗಳಿಗೆ ಮಾತ್ರ)
ಇ) ಪರೀಕ್ಷಾ ಶುಲ್ಕ
ಈ) ಕ್ರೀಡಾ ಶುಲ್ಕ
ಉ) ಗ್ರಂಥಾಲಯ ಶುಲ್ಕ
ಆ) Readers Charges ದರಗಳು:
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮೇಲಿನ ದರಗಳಂತೆ ಶುಲ್ಕ ವಿನಾಯಿತಿ ನೀಡುವುದರ
ಜೊತೆಗೆ ಈ ಕೆಳಗಿನಂತೆ ಖeಚಿಜeಡಿs ಅhಚಿಡಿges ಅನ್ನು ಸಹ ಪಾವತಿಸಲಾಗುವುದು.
ಕೋರ್ಸಿನ ಗುಂಪುReaders Charges
(10 ತಿಂಗಳಿಗೆ) (ರೂ.ಗಳಲ್ಲಿ)
ಗುಂಪು-ಎ, ಬಿ1750/-
ಗುಂಪು-ಸಿ1300/-
ಗುಂಪು-ಡಿ900/-


: ಮಾಹಿತಿ ಮೂಲ : 

 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,       

ಕರ್ನಾಟಕ ಸರ್ಕಾರ 


No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post