ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ |
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನದ ದರಗಳು |
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 518 ಬಿಎಂಎಸ್ 2013, ದಿನಾಂಕ 3.9.2013ರಂತೆ) |
ಕ್ರ. ಸಂ. | ಗುಂಪು | ಮಂಜೂರು ಮಾಡಲಾಗುವ ವಿದ್ಯಾರ್ಥಿವೇತನದ ದರ (ವಾರ್ಷಿಕ) | 1 | ಗುಂಪು-ಎ | 3500/- | 2 | ಗುಂಪು-ಬಿ | 3350/- | 3 | ಗುಂಪು-ಸಿ | 2100/- | 4 | ಗುಂಪು-ಡಿ | 1600/- |
|
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. |
ಅರ್ಹತೆಗಳು : |
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. |
2. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ. |
3. ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಿರುವುದಿಲ್ಲ. |
4.ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ನಿಗದಿಪಡಿಸಿದೆ. |
5.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ |
ಕ್ರ. ಸಂ. | ಪ್ರವರ್ಗ | ಹೊಸ | ನವೀಕರಣ | 1 | ಪ್ರವರ್ಗ-1 | 40% | 50% | 2 | ಪ್ರವರ್ಗ-2ಎ, 3ಎ ಮತ್ತು 3ಬಿ | 50% | 60% |
|
6. ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವಿದ್ಯಾರ್ಥಿವೇತನಕ್ಕೆ ಅರ್ಹರಿರುವುದಿಲ್ಲ. |
7. ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. |
8. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಕೋರ್ಸಿನ ಗುಂಪುವಾರು ಪ್ರತಿ ತಿಂಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು10 ತಿಂಗಳ ಅವಧಿಗೆ ಅರ್ಹತೆ ಮತ್ತು ಆದಾಯಮಿತಿಯನ್ನು ಪರಿಗಣಿಸಿ, ಮಂಜೂರು ಮಾಡಲಾಗುವುದು. |
ಮಂಜೂರಾತಿ ವಿಧಾನ : |
1.ಆನ್ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು. |
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು. |
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್ಲೈನ್ನಲ್ಲಿ ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. |
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್ಲೈನ್ನಲ್ಲಿ ದೃಢೀಕರಿಸುವುದು. |
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು. |
6.ಆಯಾ ವರ್ಷದಲ್ಲಿ ಲಭ್ಯವಾಗುವ ಜಿಲ್ಲಾವಾರು ಅನುದಾನಕ್ಕೆ ತಕ್ಕಂತೆ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾರ್ಥಿವೇತನವನ್ನು ಮಂಜೂರುಮಾಡುವುದು. |
7.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ ಖಜಾನೆ-2 ತಂತ್ರಾಂಶದ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾಮಾಡುವುದು. |
ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ |
|
ವಿಶೇಷ ಸೂಚನೆ: ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. |
ಅರ್ಹತೆಗಳು : |
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. |
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು. |
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್ಲೈನ್ ಮೂಲಕ ಜಮಾ ಮಾಡಲಾಗುವುದು. |
4.ವಿದ್ಯಾರ್ಥಿಗಳು (i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, (ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು (iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ. |
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. |
6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು. (i) ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ (ii) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ಆ) ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು. ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. |
ಕ್ರ. ಸಂ. | ಪ್ರವರ್ಗ | ಹೊಸ | ನವೀಕರಣ | 1 | ಪ್ರವರ್ಗ-1 | 40% | 50% | 2 | ಪ್ರವರ್ಗ-2ಎ, 3ಎ ಮತ್ತು 3ಬಿ | 50% | 60% |
|
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.) |
7. ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ, ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ) ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. |
8. ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು. |
ಅನುದಾನ ಹಂಚಿಕೆ ವಿಧಾನ : |
(ಅ) ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು. |
ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು |
1 | ಪ್ರವರ್ಗ - 1 | 15% | 2 | ಪ್ರವರ್ಗ 2ಎ | 53% | 3 | ಪ್ರವರ್ಗ - 3ಎ | 14% | 4 | ಪ್ರವರ್ಗ - 3ಬಿ | 18% | | ಒಟ್ಟು | 100% |
|
(ಆ) ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means) ಅನುಗುಣವಾಗಿ ಮಂಜೂರು ಮಾಡಬೇಕು. |
ಮಂಜೂರಾತಿ ವಿಧಾನ : |
1.ಆನ್ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು. |
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು. |
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್ಲೈನ್ನಲ್ಲಿ ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. |
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್ಲೈನ್ನಲ್ಲಿ ದೃಢೀಕರಿಸುವುದು. |
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು. |
6.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಠ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ ಪಡೆದು, ಆನ್ಲೈನ್ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್ಲೋಡ್ ಮಾಡುವುದು. |
7.ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು. |
8.ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು. |
ಶುಲ್ಕ ವಿನಾಯಿತಿ |
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನೆರವಾಗುವ ದೃಷ್ಟಿಯಿಂದ ಸರ್ಕಾರವು, ಸರ್ಕಾರದ ಕಾಲೇಜುಗಳಿಗೆ ನಿಗದಿಪಡಿಸುವ ಶುಲ್ಕದ ದರಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಯ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ಜಮಾಗೊಳಿಸಲಾಗುವುದು. |
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು. | |
ಅರ್ಹತೆಗಳು: |
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. |
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ / ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. |
3.ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ವರಮಾನ ಈ ಕೆಳಗೆ ನಿಗದಿಪಡಿಸಿದ ಗರಿಷ್ಠ ಮಿತಿಯೊಳಗೆ ಇರಬೇಕು.1.ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ | 2.ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ ಮತ್ತು ಎಲ್ಲಾ ಧರ್ಮಗಳ, ಜಾತಿಗಳ ಹಾಗೂ ಸಮುದಾಯಗಳ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ | 3.ಸಮಾಜ ಕಲ್ಯಾಣ/ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ. |
|
4.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. |
ಕ್ರ. ಸಂ. | ಪ್ರವರ್ಗ | ಹೊಸ | ನವೀಕರಣ | 1 | ಪ್ರವರ್ಗ-1 ಮತ್ತು ಅಂಧ ವಿದ್ಯಾರ್ಥಿಗಳು | 40% | 50% | 2 | ಪ್ರವರ್ಗ-2ಎ, 3ಎ ಮತ್ತು 3ಬಿ | 50% | 60% |
|
5.ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ. ಆ) ಸ್ನಾತಕೋತ್ತರ, ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಇ) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮಾ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ. |
6.ಅ) ಶುಲ್ಕ ವಿನಾಯಿತಿಗೆ ಅರ್ಹ ಇರುವ ಶುಲ್ಕಗಳು:ರಾಜ್ಯಮಟ್ಟದ ಸಮಿತಿಯು ನಿಗದಿಪಡಿಸುವ ದರಗಳಂತೆ ಈ ಕೆಳಗಿನ ಐದು ಶುಲ್ಕಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಅ) ಬೋಧನಾ ಶುಲ್ಕ ಆ) ಪ್ರಯೋಗಾಲಯ ಶುಲ್ಕ (ಯಾವ ಕೋರ್ಸುಗಳಲ್ಲಿ ಪ್ರಯೋಗಾಲಯ ಕಡ್ಡಾಯವಿದೆಯೋ ಆ ಕೋರ್ಸುಗಳಿಗೆ ಮಾತ್ರ) ಇ) ಪರೀಕ್ಷಾ ಶುಲ್ಕ ಈ) ಕ್ರೀಡಾ ಶುಲ್ಕ ಉ) ಗ್ರಂಥಾಲಯ ಶುಲ್ಕ |
ಆ) Readers Charges ದರಗಳು: |
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮೇಲಿನ ದರಗಳಂತೆ ಶುಲ್ಕ ವಿನಾಯಿತಿ ನೀಡುವುದರ ಜೊತೆಗೆ ಈ ಕೆಳಗಿನಂತೆ ಖeಚಿಜeಡಿs ಅhಚಿಡಿges ಅನ್ನು ಸಹ ಪಾವತಿಸಲಾಗುವುದು. |
ಕೋರ್ಸಿನ ಗುಂಪು | Readers Charges (10 ತಿಂಗಳಿಗೆ) (ರೂ.ಗಳಲ್ಲಿ) | ಗುಂಪು-ಎ, ಬಿ | 1750/- | ಗುಂಪು-ಸಿ | 1300/- | ಗುಂಪು-ಡಿ | 900/- |
|
: ಮಾಹಿತಿ ಮೂಲ :
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,
ಕರ್ನಾಟಕ ಸರ್ಕಾರ
No comments:
Post a Comment
ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.