Menu

Home ನಲಿಕಲಿ About ☰ Menu


 

'ಕರ್ನಾಟಕ ಸಂಭ್ರಮ ೫೦' ಪ್ರಯುಕ್ತ ರಸಪ್ರಶ್ನೆ - ೨೦೨೩

             ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಪ್ರಯುಕ್ತ “ಕರ್ನಾಟಕ ಸಂಭ್ರಮ ೫೦” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ  ಕರ್ನಾಟಕ ರಾಜ್ಯೋತ್ಸವವನ್ನು(೬೮) ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ.

          ಇದರ ನಿಮಿತ್ಯವಾಗಿ ಕನ್ನಡ ನಾಡು-ನುಡಿ,  ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ರಾಜಕೀಯ ಹಿರಿಮೆ-ಗರಿಮೆಯ ಕುರಿತು ೬೮ ಪ್ರಶ್ನೆಗಳ ರಸಪ್ರಶ್ನೆ ಕಾರ್ಯಕ್ರಮ ಇದಾಗಿದ್ದು, ಎಲ್ಲರೂ ಭಾಗವಹಿಸಿ..
'ಕರ್ನಾಟಕ ಸಂಭ್ರಮ ೫೦' ಪ್ರಯುಕ್ತ ರಸಪ್ರಶ್ನೆ - ೨೦೨೩

 
ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು Comment ಮಾಡಿ..

“ಕರ್ನಾಟಕ ಸಂಭ್ರಮ ೫೦” ನುಡಿನಮನ ಗೀತೆಗಳು(ಆಡಿಯೋ ಸಹಿತ)

“ಕರ್ನಾಟಕ ಸಂಭ್ರಮ ೫೦”  ನುಡಿನಮನ ಗೀತೆಗಳು(ಆಡಿಯೋ ಸಹಿತ)
             ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ ೫೦” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.
                 2023ರ ನವೆಂಬರ್ 01ರಂದು ರಾಜ್ಯದಲ್ಲೆಡೆ ಆಚರಿಸುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದ ಅಂಗವಾಗಿ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವುದು ಸರ್ಕಾರದ ಉದ್ದೇಶವಾಗಿದೆ.
               ಆದ್ದರಿಂದ, ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕೆಂದು ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

೫ ಹಾಡುಗಳನ್ನು  ಈ ಕೆಳಗೆ ನೀಡಲಾಗಿದೆ  
(ಸೂಚನೆ: *ಹಾಡುಗಳ ಹೆಸರಿನ ಮೇಲೆ ಒತ್ತಿ ಹಾಡಿನ ಸಾಹಿತ್ಯವನ್ನು  ಪಡೆಯಿರಿ.
*ಆಡಿಯೋ ಮೇಲೆ ಒತ್ತಿ ಹಾಡು ಕೇಳಿ & ಡೌನ್ಲೋಡ್ ಮಾಡಿಕೊಳ್ಳಬಹುದು)

 

ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ

ಹೆಸರಾಯಿತು ಕರ್ನಾಟಕ

ಉಸಿರಾಗಲಿ ಕನ್ನಡ

ಹಸಿಗೋಡೆಯ ಹರಳಿನಂತೆ

ಹುಸಿಹೋಗದ ಕನ್ನಡ

ಹೊಸೆದ ಹಾಗೆ ಹುರಿಗೊಳ್ಳುವ

ಗುರಿ ತಾಗುವ ಕನ್ನಡ;

ಕುರಿತೋದದ ಪರಿಣತಮತಿ -

ಅರಿತವರಿಗೆ ಹೂಗೊಂಡ

ಪಡುಗಡಲಿನ ತೆರೆಗಳಂತೆ

ಹೆಡೆ ಬಿಚ್ಚುತ ಮೊರೆಯುವ

ಸಹ್ಯಾದ್ರಿಯ ಶಿಖರದಂತೆ

ಬಾನೆತ್ತರ ಕರೆಯುವ

ಗುಡಿ - ಗೋಪುರ ಹೊಂಗಳಸಕೆ

ಚೆಂಬೆಳಕಿನ ಕನ್ನಡ;

ನಮ್ಮೆಲ್ಲರ ಮೈಮನಸಿನ

ಹೊಂಗನಸಿನ ಕನ್ನಡ

ತ್ರಿಪದಿಯಿಂದ ಸಾಸಿರಪದಿ

ಸ್ವಚ್ಛಂದದ ಉಲ್ಲಾಸ

ಭಾವಗೀತೆ, ಮಹಾಕಾವ್ಯ -

ವೀರ - ವಿನಯ ಸಮರಸ

ಹಳ್ಳಿ - ಊರು, ನಗರ - ಜಿಲ್ಲೆ

ಮೊಗದ ಹೊಗರು ಕನ್ನಡಿ;

ಎಲ್ಲ ದಿಸೆಗು ಚೆಲ್ಲುವರಿದ

ಚೈತನ್ಯದ ದಾಂಗುಡಿ

ಸಾಹಿತ್ಯ - ಚನ್ನವೀರ ಕಣವಿ

ಎಲ್ಲಾದರು ಇರು ಎಂತಾದರು ಇರು - ಕುವೆಂಪು

ಎಲ್ಲಾದರು ಇರು; ಎಂತಾದರು ಇರು;
ಎಂದೆಂದಿಗು ನೀ ಕನ್ನಡವಾಗಿರು.

ಕನ್ನಡ ಗೋವಿನ ಓ ಮುದ್ದಿನ  ಕರು,
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!

ನೀ ಮೆಟ್ಟುವ ನೆಲ – ಅದೆ ಕರ್ನಾಟಕ;
ನೀನೇರುವ ಮಲೆ – ಸಹ್ಯಾದ್ರಿ.
ನೀ ಮುಟ್ಟುವ ಮರ – ಶ್ರೀಗಂಧದ ಮರ;
ನೀ ಕುಡಿಯುವ ನೀರ್ – ಕಾವೇರಿ.

ಪಂಪನನೋದುವ ನಿನ್ನಾ ನಾಲಗೆ
ಕನ್ನಡವೇ ಸತ್ಯ.
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ.
ಹರಿಹರ ರಾಘವರಿಗೆ ಎರಗುವ ಮನ,
ಹಾಳಾಗಿಹ ಹಂಪೆಗೆ ಕೊರಗುವ ಮನ,
ಪೆಂಪಿನ ಬನವಾಸಿಗೆ ಕರಗುವ ಮನ;
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ,
ಜೋಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಹೊಂಪುಳಿವೋಗುವ ಮನ;
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!

ಕಾಜಾಣಕೆ ಗಿಳಿ ಕೋಗಿಲೆಯಿಂಪಿಗೆ,
ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ,
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೋಮಾಂಚನಗೊಳುವಾತನ ಮನ
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಅನ್ಯವನೆಲದೆ ಮಿಥ್ಯಾ!


ಸಾಹಿತ್ಯ: ಕುವೆಂಪು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು || ೧ ||

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || ೨ ||

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು|| ೩ ||

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ

ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ
ಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇ
ಒಂದೇ ಜಗವು ಮನವು ಕನ್ನಡಿಗರು ಎಂದೆ
ಕುಲವೊಂದೇ ಛಲವೊಂದೇ ನೀತಿಯ ನೆಲೆಯೊಂದೇ
ಹೀಗೆನ್ನದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೆ
ಕನ್ನಡವೆಂದು ಒಪ್ಪದು ಕರ್ನಾಟಕ ನಿಂದೆ

ಕನ್ನಡ ಮಾತೇ ಮಾತೆಯು ಕರ್ನಾಟಕ ಒಂದೇ
ಅದು ದೈವತ ಅದು ಜೀವಿತ ಒಪ್ಪಿಹೆವದು ಎಂದೆ
ನಮ್ಮದು ನಿಮ್ಮದು ಅವರದು ಈ ಆಸ್ತಿ ಪಾಸ್ತಿ
ನಾಡಿನ ತಾಯಿಗೆ ಸೇರಿದೆ ಬೇರೆಯ ಮನೆ ನಾಸ್ತಿ
ಕನ್ನಡ ಕಾಯಕದಲ್ಲಿಲ್ಲವು ಕಮ್ಮೀ ಜಾಸ್ತಿ
ಇದನೊಪ್ಪದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಕರ್ನಾಟಕ ಹಿತ ಹಿಡಿತವು ಕನ್ನಡ ಕುಲದಿಂದೆ

ಕನ್ನಡವು ಭಾರತವು ಜಗವೆಲ್ಲವು ಒಂದೇ
ತುಂಬಿದೆ ಕನ್ನಡ ಕುಲವನ್ನು ಒಪ್ಪುವ ಕುಲದಿಂದೇ
ಇಂತರಿಯದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಉಚ್ಛರಿಸಿರಿ ಮಾತೆಗೆ ಜಯ ಜಯ ಜಯವೆಂದೇ

ಸಾಹಿತ್ಯ: ದ. ರಾ. ಬೇಂದ್ರೆ

ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ

ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ.

ಸಾಹಿತ್ಯ: ಡಾ.ಸಿದ್ದಯ್ಯ ಪುರಾಣಿಕ

GPT(6-8) 2022 ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿ ಪ್ರಕಟ(19/10/2023)

“ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 ರಲ್ಲಿ ದಿನಾಂಕ: 12/10/2023ರ ವಿಭಾಗೀಯ ಪೀಠದ ತೀರ್ಪಿನಂತೆ ದಿನಾಂಕ: 08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 19/10/2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ: 21/10/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ರಾಜ್ಯದ (371ಜೆ ಗೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಕರಣಗಳು ಬಾಕಿ ಇರುವ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ ಮತ್ತು ಬಿ.ಬಿ.ಎಂ.ಪಿ ವ್ಯಾಪ್ತಿಯ 8% ಹುದ್ದೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಗಳಾದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳನ್ನು ಹೊರತುಪಡಿಸಿ) ಜಿಲ್ಲೆಗಳಲ್ಲಿನ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

GPT(6-8) 2022 ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿ ಪ್ರಕಟ 19/10/2023

ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವುದು.

ಜಿಲ್ಲಾವಾರು 1:1 ಅಂತಿಮ ಪಟ್ಟಿಯಲ್ಲಿ ಅರ್ಹರಾದ  ಅಭ್ಯರ್ಥಿಗಳ ಪಟ್ಟಿ.(19/10/2023)

NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ..

        2023-24ನೇ ಸಾಲಿನ NMMS ಪರೀಕ್ಷೆಗೆ Online ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು  ದಿನಾಂಕ 17/10/2023 ರ ವರೆಗೆ ವಿಸ್ತರಿಸಲಾಗಿತ್ತು, ಆದರೆ ಮತ್ತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ  30/10/2023 ರ ವರೆಗೆ ವಿಸ್ತರಿಸಿ KSQAAC ಸುತ್ತೋಲೆ ಹೊರಡಿಸಿದೆ.
NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ..


ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.10.2023

ವಿದ್ಯಾರ್ಥಿ  ವೇತನ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿ / ದಾಖಲೆ

  1.  ವಿದ್ಯಾರ್ಥಿಯ SATS ಸಂಖ್ಯೆ.
  2. ವಿದ್ಯಾರ್ಥಿಯ ಆಧಾರ ಕಾರ್ಡ್‌.
  3. ವಿದ್ಯಾರ್ಥಿಯ ತಂದೆ & ತಾಯಿಯ ಆಧಾರ ಕಾರ್ಡ್‌.
  4. ಜಾತಿ & ಆದಾಯ ಪ್ರಮಾಣ ಪತ್ರ.
  5. ವಿದ್ಯಾರ್ಥಿ ವಿಕಲಚೇತನ ಆಗಿದ್ದಲ್ಲಿ ವಿಕಲಚೇತನ ಪ್ರಮಾಣ ಪತ್ರ.
  6. ತಂದೆ ಅಥವಾ ತಾಯಿ ಕೂಲಿ ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಪಡೆದಕೊಂಡ ಪ್ರಮಾಣ ಪತ್ರ.
  7. ಅಲ್ಪಸಂಖ್ಯಾತ ವಿದ್ಯಾರ್ಥಿಗಳಾಗಿದ್ದಲ್ಲಿ NSP ವಿದ್ಯಾರ್ಥಿವೇತನದ ID ಹಿಂದಿನ ವರ್ಷ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ನವೀಕರಣ ಮಾಡಿಕೊಳ್ಳಬಹುದು.
  8. ಮೋಬೈಲ್ ಸಂಖ್ಯೆ (OTP ಸಲುವಾಗಿ)

SSP ವಿದ್ಯಾರ್ಥಿ ಖಾತೆಗೆ ಲಾಗಿನ್ ಆಗಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ (ಈಗಾಗಲೇ sspಯಲ್ಲಿ ಖಾತೆ ಸೃಜಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ).Click Here to Login Your Account

ಹಿಂದಿನ ವರ್ಷದ ವಿದ್ಯಾರ್ಥಿ ವೇತನ ಅರ್ಜಿ ಸ್ಥಿತಿ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
  1. ನಿಮ್ಮ SATS ಸಂಖ್ಯೆ  ನಮೂದಿಸಿ.
  2.  ಶೈಕ್ಷಣಿಕ ವರ್ಷ ನಮೂದಿಸಿ.
  3. Submit ಮೇಲೆ ಕ್ಲಿಕ್ ಮಾಡಿ.
  4. Status ತಿಳಿಯಿರಿ.

ಸಹಾಯಕ್ಕಾಗಿ ಸಂಪರ್ಕಿಸಿ :
ಸಮಾಜ ಕಲ್ಯಾಣ ಇಲಾಖೆ
9008400010 / 9008400078

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
080-22535931

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
080-22374836 / 8050770005


ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ : 080-35254757

Download ನವೋದಯ ವಿದ್ಯಾಲಯ 6th ಹಾಲ್ ಟಿಕೆಟ್ / JNV Admit Card-2024

Download ನವೋದಯ ವಿದ್ಯಾಲಯ 6th ಹಾಲ್ ಟಿಕೆಟ್ / JNV Admit Card-2024

      ಜವಾಹರ್ ನವೋದಯ ವಿದ್ಯಾಲಯ ಸಮಿತಿ ನಡೆಸುವ 2024-25 ಶೈಕ್ಷಣಿಕ ವರ್ಷದ, 6 ನೇ ತರಗತಿ ಪರೀಕ್ಷೆ 04-11-2023 ರ ಶನಿವಾರದಂದು ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು https://navodaya.gov.in/nvs/en/Home1 ವೆಬ್‌ಸೈಟ್ ಮೂಲಕ ಡೌನ್ಲೋಡ್ ಮಾಡಬಹುದು. 

   ವಿದ್ಯಾರ್ಥಿಯ Registration Number ಮತ್ತು Date Of Birth ನಮೂದಿಸಿ ಹಾಲ್ ಟಿಕೆಟ್ ಅನ್ನು ಈ ಕೆಳಗಿನ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಿ.



Popular Post